<p><strong>ಶಿರಸಿ:</strong> ನೆರೆ ಹಾವಳಿಗೆ ಹಾನಿಗೀಡಾದ ತೋಟ, ಗದ್ದೆಗಳ ಪುನಶ್ಚೇತನಕ್ಕೆ ಉದ್ಯೋಗ ಖಾತ್ರಿ (ನರೇಗಾ) ಯೋಜನೆ ಅಡಿ ಹೆಚ್ಚು ಕೆಲಸ ಮಾಡಿಕೊಳ್ಳಲು ಅವಕಾಶ ನೀಡಲಾಗುವುದು ಎಂದು ವಿಧಾನಸಭಾ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು.</p>.<p>ತಾಲ್ಲೂಕಿನ ಚಿಂಚಳಿಕೆಯಲ್ಲಿ ಕೆರೆ ಒಡ್ಡು ಒಡೆದು ಕೃಷಿಭೂಮಿಗೆ ಉಂಟಾಗಿದ್ದ ಹಾನಿಭಾನುವಾರ ಪರಿಶೀಲಿಸಿದ ಬಳಿಕ ಮಾಧ್ಯದವರೊಡನೆ ಮಾತನಾಡಿದ ಅವರು, ‘ಮಳೆಗಾಲದ ಬಳಿಕ ಕೃಷಿ ಜಮೀನಿಗೆ ಮಣ್ಣಿನ ಕೆಲಸಕ್ಕೆ ಅನುವು ಮಾಡಿಕೊಡಲಾಗುತ್ತದೆ. ಸದ್ಯ ತ್ವರಿತಗತಿಯಲ್ಲಿ ಕ್ರಿಯಾಯೋಜನೆ ರೂಪಿಸಲು ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ’ ಎಂದರು.</p>.<p>‘ಅತಿವೃಷ್ಟಿಯಿಂದ ಉಂಟಾದ ಹಾನಿಗೆ ಸೂಕ್ತ ಪರಿಹಾರ ಕಲ್ಪಿಸಲಾಗುವುದು. ಈಗಾಗಲೆ ಜಿಲ್ಲೆಯಲ್ಲಿ ತುರ್ತು ಪರಿಹಾರ ಕಾರ್ಯಗಳು ಸಮರೋಪಾದಿಯಲ್ಲಿ ನಡೆಯುತ್ತಿದೆ. ಜೀವಹಾನಿ ಉಂಟಾಗದಂತೆ ಸಾಕಷ್ಟು ಎಚ್ಚರ ವಹಿಸಲಾಗಿದೆ’ ಎಂದರು.</p>.<p>‘ಶಿರಸಿ–ಕುಮಟಾ ರಸ್ತೆಯಲ್ಲಿ ವಾಹನಗಳ ಸಂಚಾರಕ್ಕೆ ತೊಂದರೆಯಾಗದ ರೀತಿಯಲ್ಲಿ ತುರ್ತು ಕ್ರಮವಹಿಸಲು ಸೂಚಿಸಲಾಗಿದೆ. ಮಳೆಗೆ ರಸ್ತೆಗೆ ಧಕ್ಕೆಯಾಗದಂತೆ ಕೆಲಸ ಮಾಡಲು ಎಚ್ಚರಿಸಿದ್ದೇನೆ’ ಎಂದರು.</p>.<p>‘ಬೆಂಗಳೂರಿನಲ್ಲಿ ಪೂರ್ವ ನಿಯೋಜಿತ ಕಾರ್ಯಕ್ರಮಗಳಿದ್ದ ಕಾರಣ ಕ್ಷೇತ್ರಕ್ಕೆ ತಕ್ಷಣವೇ ಭೇಟಿ ನೀಡಲು ಆಗಿರಲಿಲ್ಲ. ನೆರೆಹಾನಿಗೆ ಸೂಕ್ತ ಪರಿಹಾರ ನೀಡಲು ಕ್ರಮವಹಿಸುತ್ತೇನೆ’ ಎಂದರು.</p>.<p>ನೆರೆ ಬಾಧಿತ ಪ್ರದೇಶಗಳಾದ ಎಮ್ಮೆಗುಂಡಿ, ರೇವಣಕಟ್ಟಾ, ಬ್ಯಾಗದ್ದೆ, ನಗರದ ಆದರ್ಶನಗರ, ಮಹಾಲಕ್ಮಿ ಲೇಔಟ್, ಬಶೆಟ್ಟಿಕೆರೆ, ಗೌಳಿ ಓಣಿ ಸೇರಿದಂತೆ ವಿವಿಧೆಡೆ ಹಾನಿ ಪರಿಶೀಲಿಸಿದರು. ಹುಸರಿಯಲ್ಲಿ ಪ್ರವಾಹದಿಂದ ಮೃತಪಟ್ಟ ಗಂಗಾಧರ ಗೌಡ ಮನೆಗೆ ಭೇಟಿ ನೀಡಿ, ಕುಟುಂಬಸ್ಥರಿಗೆ ಪರಿಹಾರದ ಚೆಕ್ ವಿತರಿಸಿದರು.</p>.<p>ಈ ಸಂದರ್ಭದಲ್ಲಿ ಆರ್.ಡಿ.ಹೆಗಡೆ ಜಾನ್ಮನೆ, ತಾಲ್ಲೂಕು ಪಂಚಾಯ್ತಿ ಮಾಜಿ ಸದಸ್ಯ ವಿನಾಯಕ ಹೆಗಡೆ, ಶಿವಳ್ಳಿ ಗ್ರಾಮ ಪಂಚಾಯ್ತಿ ಸದಸ್ಯ ಮಂಜುನಾಥ ಹೆಗಡೆ, ತಹಶೀಲ್ದಾರ್ ಎಂ.ಆರ್.ಕುಲಕರ್ಣಿ, ತಾಲ್ಲೂಕು ಪಂಚಾಯ್ತಿ ಇಒ ಎಫ್.ಜಿ.ಚೆನ್ನಣ್ಣನವರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿರಸಿ:</strong> ನೆರೆ ಹಾವಳಿಗೆ ಹಾನಿಗೀಡಾದ ತೋಟ, ಗದ್ದೆಗಳ ಪುನಶ್ಚೇತನಕ್ಕೆ ಉದ್ಯೋಗ ಖಾತ್ರಿ (ನರೇಗಾ) ಯೋಜನೆ ಅಡಿ ಹೆಚ್ಚು ಕೆಲಸ ಮಾಡಿಕೊಳ್ಳಲು ಅವಕಾಶ ನೀಡಲಾಗುವುದು ಎಂದು ವಿಧಾನಸಭಾ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು.</p>.<p>ತಾಲ್ಲೂಕಿನ ಚಿಂಚಳಿಕೆಯಲ್ಲಿ ಕೆರೆ ಒಡ್ಡು ಒಡೆದು ಕೃಷಿಭೂಮಿಗೆ ಉಂಟಾಗಿದ್ದ ಹಾನಿಭಾನುವಾರ ಪರಿಶೀಲಿಸಿದ ಬಳಿಕ ಮಾಧ್ಯದವರೊಡನೆ ಮಾತನಾಡಿದ ಅವರು, ‘ಮಳೆಗಾಲದ ಬಳಿಕ ಕೃಷಿ ಜಮೀನಿಗೆ ಮಣ್ಣಿನ ಕೆಲಸಕ್ಕೆ ಅನುವು ಮಾಡಿಕೊಡಲಾಗುತ್ತದೆ. ಸದ್ಯ ತ್ವರಿತಗತಿಯಲ್ಲಿ ಕ್ರಿಯಾಯೋಜನೆ ರೂಪಿಸಲು ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ’ ಎಂದರು.</p>.<p>‘ಅತಿವೃಷ್ಟಿಯಿಂದ ಉಂಟಾದ ಹಾನಿಗೆ ಸೂಕ್ತ ಪರಿಹಾರ ಕಲ್ಪಿಸಲಾಗುವುದು. ಈಗಾಗಲೆ ಜಿಲ್ಲೆಯಲ್ಲಿ ತುರ್ತು ಪರಿಹಾರ ಕಾರ್ಯಗಳು ಸಮರೋಪಾದಿಯಲ್ಲಿ ನಡೆಯುತ್ತಿದೆ. ಜೀವಹಾನಿ ಉಂಟಾಗದಂತೆ ಸಾಕಷ್ಟು ಎಚ್ಚರ ವಹಿಸಲಾಗಿದೆ’ ಎಂದರು.</p>.<p>‘ಶಿರಸಿ–ಕುಮಟಾ ರಸ್ತೆಯಲ್ಲಿ ವಾಹನಗಳ ಸಂಚಾರಕ್ಕೆ ತೊಂದರೆಯಾಗದ ರೀತಿಯಲ್ಲಿ ತುರ್ತು ಕ್ರಮವಹಿಸಲು ಸೂಚಿಸಲಾಗಿದೆ. ಮಳೆಗೆ ರಸ್ತೆಗೆ ಧಕ್ಕೆಯಾಗದಂತೆ ಕೆಲಸ ಮಾಡಲು ಎಚ್ಚರಿಸಿದ್ದೇನೆ’ ಎಂದರು.</p>.<p>‘ಬೆಂಗಳೂರಿನಲ್ಲಿ ಪೂರ್ವ ನಿಯೋಜಿತ ಕಾರ್ಯಕ್ರಮಗಳಿದ್ದ ಕಾರಣ ಕ್ಷೇತ್ರಕ್ಕೆ ತಕ್ಷಣವೇ ಭೇಟಿ ನೀಡಲು ಆಗಿರಲಿಲ್ಲ. ನೆರೆಹಾನಿಗೆ ಸೂಕ್ತ ಪರಿಹಾರ ನೀಡಲು ಕ್ರಮವಹಿಸುತ್ತೇನೆ’ ಎಂದರು.</p>.<p>ನೆರೆ ಬಾಧಿತ ಪ್ರದೇಶಗಳಾದ ಎಮ್ಮೆಗುಂಡಿ, ರೇವಣಕಟ್ಟಾ, ಬ್ಯಾಗದ್ದೆ, ನಗರದ ಆದರ್ಶನಗರ, ಮಹಾಲಕ್ಮಿ ಲೇಔಟ್, ಬಶೆಟ್ಟಿಕೆರೆ, ಗೌಳಿ ಓಣಿ ಸೇರಿದಂತೆ ವಿವಿಧೆಡೆ ಹಾನಿ ಪರಿಶೀಲಿಸಿದರು. ಹುಸರಿಯಲ್ಲಿ ಪ್ರವಾಹದಿಂದ ಮೃತಪಟ್ಟ ಗಂಗಾಧರ ಗೌಡ ಮನೆಗೆ ಭೇಟಿ ನೀಡಿ, ಕುಟುಂಬಸ್ಥರಿಗೆ ಪರಿಹಾರದ ಚೆಕ್ ವಿತರಿಸಿದರು.</p>.<p>ಈ ಸಂದರ್ಭದಲ್ಲಿ ಆರ್.ಡಿ.ಹೆಗಡೆ ಜಾನ್ಮನೆ, ತಾಲ್ಲೂಕು ಪಂಚಾಯ್ತಿ ಮಾಜಿ ಸದಸ್ಯ ವಿನಾಯಕ ಹೆಗಡೆ, ಶಿವಳ್ಳಿ ಗ್ರಾಮ ಪಂಚಾಯ್ತಿ ಸದಸ್ಯ ಮಂಜುನಾಥ ಹೆಗಡೆ, ತಹಶೀಲ್ದಾರ್ ಎಂ.ಆರ್.ಕುಲಕರ್ಣಿ, ತಾಲ್ಲೂಕು ಪಂಚಾಯ್ತಿ ಇಒ ಎಫ್.ಜಿ.ಚೆನ್ನಣ್ಣನವರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>