<p><strong>ಕಾರವಾರ:</strong> ಜಿಲ್ಲೆಯ ವಿವಿಧ ತಾಲ್ಲೂಕುಗಳ ಆಸ್ಪತ್ರೆಗಳಲ್ಲಿ ಕೋವಿಡ್ 19ಗೆ ಚಿಕಿತ್ಸೆ ಪಡೆಯುತ್ತಿದ್ದ 99 ಮಂದಿ ಗುಣಮುಖರಾಗಿದ್ದು, ಭಾನುವಾರ ಮನೆಗಳಿಗೆ ತೆರಳಿದ್ದಾರೆ. ಅವರಲ್ಲಿ ಭಟ್ಕಳತಾಲ್ಲೂಕು ಒಂದರಿಂದಲೇ75 ಮಂದಿ ಸೇರಿದ್ದಾರೆ.</p>.<p>ಶಿರಸಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ 17 ಮಂದಿ ಸೋಂಕುಮುಕ್ತರಾಗಿದ್ದಾರೆ. ಕುಮಟಾದಲ್ಲಿ ನಾಲ್ವರು, ಹಳಿಯಾಳದಲ್ಲಿ ಇಬ್ಬರು ಹಾಗೂ ಸಿದ್ದಾಪುರದಲ್ಲಿ ಒಬ್ಬರು ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿಈವರೆಗೆ 445 ಮಂದಿ ಕೋವಿಡ್ನಿಂದ ಸಂಪೂರ್ಣವಾಗಿ ಚೇತರಿಸಿಕೊಂಡಿದ್ದಾರೆ. 630 ಮಂದಿ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.</p>.<p class="Subhead"><strong>69 ಮಂದಿಗೆ ಸೋಂಕು</strong>:ಜಿಲ್ಲೆಯ 69 ಮಂದಿಗೆ ಕೋವಿಡ್ 19 ದೃಢಪಟ್ಟಿದೆ ಎಂದು ಆರೋಗ್ಯ ಇಲಾಖೆಯ ಭಾನುವಾರದ ವರದಿಮಾಹಿತಿ ನೀಡಿದೆ. ಈ ಪೈಕಿ ಕುಮಟಾ ತಾಲ್ಲೂಕಿನಲ್ಲಿ 17 ಮಂದಿಗೆ ಖಚಿತವಾಗಿದೆ.</p>.<p>ಯಲ್ಲಾಪುರ ತಾಲ್ಲೂಕಿನಲ್ಲಿ 12 ಜನರಿಗೆ,ಅಂಕೋಲಾ ತಾಲ್ಲೂಕಿನಲ್ಲಿ10, ಭಟ್ಕಳ, ಕಾರವಾರ ಹಾಗೂ ಮುಂಡಗೋಡ ತಾಲ್ಲೂಕುಗಳಲ್ಲಿ ತಲಾ ಆರು, ಹೊನ್ನಾವರ ತಾಲ್ಲೂಕಿನಲ್ಲಿ ನಾಲ್ವರು, ಸಿದ್ದಾಪುರತಾಲ್ಲೂಕಿನಲ್ಲಿ ಮೂವರು, ಶಿರಸಿಹಾಗೂ ಜೊಯಿಡಾ ತಾಲ್ಲೂಕಿನಲ್ಲಿ ತಲಾ ಇಬ್ಬರು ಮತ್ತುಹಳಿಯಾಳ ತಾಲ್ಲೂಕಿನಲ್ಲಿ ಒಬ್ಬರಿಗೆ ಕೋವಿಡ್ ದೃಢಪಟ್ಟಿದೆ.</p>.<p>37 ಜನರ ಸೋಂಕಿನ ಮೂಲ ಪತ್ತೆಯಾಗಿಲ್ಲ. ಈ ಬಗ್ಗೆ ಆರೋಗ್ಯ ಇಲಾಖೆ ಅಧಿಕಾರಿಗಳು ತನಿಖೆ ಕೈಗೊಂಡಿದ್ದಾರೆ. ಏಳು ಮಂದಿಗೆ ಬೇರೆ ರಾಜ್ಯಗಳಿಂದ, ನಗರಗಳಿಂದಪ್ರಯಾಣಿಸಿರುವ ಹಿನ್ನೆಲೆಯಿದೆ. ಆರು ಮಂದಿಗೆ ಜ್ವರದ (ಐ.ಎಲ್.ಐ) ಲಕ್ಷಣಗಳಿವೆ. ಒಬ್ಬರಿಗೆ ಉಸಿರಾಟದ ತೀವ್ರ ಸಮಸ್ಯೆ (ಎಸ್.ಎ.ಆರ್.ಐ) ಇರುವುದು ಆರೋಗ್ಯ ತಪಾಸಣೆಯ ವೇಳೆ ಗೊತ್ತಾಗಿದೆ.</p>.<p class="Subhead">ಆರೈಕೆ ಕೇಂದ್ರಕ್ಕೆ ದಾಖಲು:ಕೋವಿಡ್ 19 ಸೋಂಕಿತರಲ್ಲಿ ರೋಗ ಲಕ್ಷಣಗಳು ಇಲ್ಲದವರನ್ನು ಬಿ.ಸಿ.ಎಂ ವಸತಿ ನಿಲಯದಲ್ಲಿ ಆರಂಭಿಸಲಾಗಿರುವ ಕೋವಿಡ್ ಆರೈಕೆ ಕೇಂದ್ರಕ್ಕೆ ವರ್ಗಾಯಿಸಲಾಗಿದೆ. ಅವರೆಲ್ಲರಿಗೂ ಸರ್ಕಾರದ ಮಾರ್ಗಸೂಚಿಯ ಪ್ರಕಾರವೇ ಅಲೋಪಥಿ ಶೈಲಿಯ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p><strong>ಜಿಲ್ಲೆಯಲ್ಲಿ ಕೊರೊನಾ: ಅಂಕಿ ಅಂಶ</strong></p>.<p>1,085 -ಒಟ್ಟು ಸೋಂಕಿತರು</p>.<p>630 -ಸಕ್ರಿಯ ಪ್ರಕರಣಗಳು</p>.<p>445 -ಗುಣಮುಖರಾದವರು</p>.<p>10 -ಮೃತರು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾರವಾರ:</strong> ಜಿಲ್ಲೆಯ ವಿವಿಧ ತಾಲ್ಲೂಕುಗಳ ಆಸ್ಪತ್ರೆಗಳಲ್ಲಿ ಕೋವಿಡ್ 19ಗೆ ಚಿಕಿತ್ಸೆ ಪಡೆಯುತ್ತಿದ್ದ 99 ಮಂದಿ ಗುಣಮುಖರಾಗಿದ್ದು, ಭಾನುವಾರ ಮನೆಗಳಿಗೆ ತೆರಳಿದ್ದಾರೆ. ಅವರಲ್ಲಿ ಭಟ್ಕಳತಾಲ್ಲೂಕು ಒಂದರಿಂದಲೇ75 ಮಂದಿ ಸೇರಿದ್ದಾರೆ.</p>.<p>ಶಿರಸಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ 17 ಮಂದಿ ಸೋಂಕುಮುಕ್ತರಾಗಿದ್ದಾರೆ. ಕುಮಟಾದಲ್ಲಿ ನಾಲ್ವರು, ಹಳಿಯಾಳದಲ್ಲಿ ಇಬ್ಬರು ಹಾಗೂ ಸಿದ್ದಾಪುರದಲ್ಲಿ ಒಬ್ಬರು ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿಈವರೆಗೆ 445 ಮಂದಿ ಕೋವಿಡ್ನಿಂದ ಸಂಪೂರ್ಣವಾಗಿ ಚೇತರಿಸಿಕೊಂಡಿದ್ದಾರೆ. 630 ಮಂದಿ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.</p>.<p class="Subhead"><strong>69 ಮಂದಿಗೆ ಸೋಂಕು</strong>:ಜಿಲ್ಲೆಯ 69 ಮಂದಿಗೆ ಕೋವಿಡ್ 19 ದೃಢಪಟ್ಟಿದೆ ಎಂದು ಆರೋಗ್ಯ ಇಲಾಖೆಯ ಭಾನುವಾರದ ವರದಿಮಾಹಿತಿ ನೀಡಿದೆ. ಈ ಪೈಕಿ ಕುಮಟಾ ತಾಲ್ಲೂಕಿನಲ್ಲಿ 17 ಮಂದಿಗೆ ಖಚಿತವಾಗಿದೆ.</p>.<p>ಯಲ್ಲಾಪುರ ತಾಲ್ಲೂಕಿನಲ್ಲಿ 12 ಜನರಿಗೆ,ಅಂಕೋಲಾ ತಾಲ್ಲೂಕಿನಲ್ಲಿ10, ಭಟ್ಕಳ, ಕಾರವಾರ ಹಾಗೂ ಮುಂಡಗೋಡ ತಾಲ್ಲೂಕುಗಳಲ್ಲಿ ತಲಾ ಆರು, ಹೊನ್ನಾವರ ತಾಲ್ಲೂಕಿನಲ್ಲಿ ನಾಲ್ವರು, ಸಿದ್ದಾಪುರತಾಲ್ಲೂಕಿನಲ್ಲಿ ಮೂವರು, ಶಿರಸಿಹಾಗೂ ಜೊಯಿಡಾ ತಾಲ್ಲೂಕಿನಲ್ಲಿ ತಲಾ ಇಬ್ಬರು ಮತ್ತುಹಳಿಯಾಳ ತಾಲ್ಲೂಕಿನಲ್ಲಿ ಒಬ್ಬರಿಗೆ ಕೋವಿಡ್ ದೃಢಪಟ್ಟಿದೆ.</p>.<p>37 ಜನರ ಸೋಂಕಿನ ಮೂಲ ಪತ್ತೆಯಾಗಿಲ್ಲ. ಈ ಬಗ್ಗೆ ಆರೋಗ್ಯ ಇಲಾಖೆ ಅಧಿಕಾರಿಗಳು ತನಿಖೆ ಕೈಗೊಂಡಿದ್ದಾರೆ. ಏಳು ಮಂದಿಗೆ ಬೇರೆ ರಾಜ್ಯಗಳಿಂದ, ನಗರಗಳಿಂದಪ್ರಯಾಣಿಸಿರುವ ಹಿನ್ನೆಲೆಯಿದೆ. ಆರು ಮಂದಿಗೆ ಜ್ವರದ (ಐ.ಎಲ್.ಐ) ಲಕ್ಷಣಗಳಿವೆ. ಒಬ್ಬರಿಗೆ ಉಸಿರಾಟದ ತೀವ್ರ ಸಮಸ್ಯೆ (ಎಸ್.ಎ.ಆರ್.ಐ) ಇರುವುದು ಆರೋಗ್ಯ ತಪಾಸಣೆಯ ವೇಳೆ ಗೊತ್ತಾಗಿದೆ.</p>.<p class="Subhead">ಆರೈಕೆ ಕೇಂದ್ರಕ್ಕೆ ದಾಖಲು:ಕೋವಿಡ್ 19 ಸೋಂಕಿತರಲ್ಲಿ ರೋಗ ಲಕ್ಷಣಗಳು ಇಲ್ಲದವರನ್ನು ಬಿ.ಸಿ.ಎಂ ವಸತಿ ನಿಲಯದಲ್ಲಿ ಆರಂಭಿಸಲಾಗಿರುವ ಕೋವಿಡ್ ಆರೈಕೆ ಕೇಂದ್ರಕ್ಕೆ ವರ್ಗಾಯಿಸಲಾಗಿದೆ. ಅವರೆಲ್ಲರಿಗೂ ಸರ್ಕಾರದ ಮಾರ್ಗಸೂಚಿಯ ಪ್ರಕಾರವೇ ಅಲೋಪಥಿ ಶೈಲಿಯ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p><strong>ಜಿಲ್ಲೆಯಲ್ಲಿ ಕೊರೊನಾ: ಅಂಕಿ ಅಂಶ</strong></p>.<p>1,085 -ಒಟ್ಟು ಸೋಂಕಿತರು</p>.<p>630 -ಸಕ್ರಿಯ ಪ್ರಕರಣಗಳು</p>.<p>445 -ಗುಣಮುಖರಾದವರು</p>.<p>10 -ಮೃತರು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>