ಅನಾರೋಗ್ಯದಿಂದ ಬಳಲುತ್ತಿದ್ದ ಅವರ ತಾಯಿ ಸಾವಿತ್ರಿ ಕೊಳಂಬಕರ್, ಮಂಗಳವಾರ ಮುಂಜಾನೆ ಮೃತಪಟ್ಟಿದ್ದರು. ಅವರ ಮೃತದೇಹವನ್ನು ಅಂತ್ಯಸಂಸ್ಕಾರಕ್ಕೆಂದು ಸ್ಮಶಾನಕ್ಕೆ ಕೊಂಡೊಯ್ಯಲಾಗಿತ್ತು. ಏಕೈಕ ಮಗನಾಗಿದ್ದ ಮಂಜುನಾಥ್ ಎಲ್ಲ ಧಾರ್ಮಿಕ ವಿಧಿವಿಧಾನಗಳನ್ನು ಪೂರೈಸಿದ್ದರು. ಚಿತೆಗೆ ಬೆಂಕಿ ಇಡುತ್ತಿದ್ದಂತೆ ಅವರಿಗೂ ಏಕಾಏಕಿ ಎದೆನೋವು ಕಾಣಿಸಿಕೊಂಡಿತ್ತು. ಕೂಡಲೇ ಸಿದ್ದರದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಯಿತು. ಹೆಚ್ಚಿನ ಚಿಕಿತ್ಸೆಗೆ ಜಿಲ್ಲಾ ಆಸ್ಪತ್ರೆಗೆ ಕರೆತರುವಷ್ಟರಲ್ಲಿಯೇ ಮೃತಪಟ್ಟಿದ್ದರು.