ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯಲ್ಲಾಪುರ | ಮುಂಬೈ–ಮಂಗಳೂರು ಬಸ್‌ನಲ್ಲಿ ಬೆಂಕಿ ಅವಘಡ: ಪ್ರಯಾಣಿಕರೆಲ್ಲರೂ ಪಾರು

Last Updated 16 ಡಿಸೆಂಬರ್ 2021, 9:13 IST
ಅಕ್ಷರ ಗಾತ್ರ

ಯಲ್ಲಾಪುರ: ಮುಂಬೈನಿಂದ ಮಂಗಳೂರಿಗೆ ತೆರಳುತ್ತಿದ್ದ 'ಮೆರ್ಸಿ ಟ್ರಾವೆಲ್ಸ್'ನ ಬಸ್ ಯಲ್ಲಾಪುರ ಪಟ್ಟಣದ ಜೋಡುಕೆರೆ ಮಾರುತಿ ದೇವಸ್ಥಾನದ ಎದುರು ಬೆಂಕಿಗೆ ಆಹುತಿಯಾಗಿದೆ. ಅದೃಷ್ಟವಶಾತ್ ಬಸ್‌ನಲ್ಲಿದ್ದ ಯಾರಿಗೂ ಅಪಾಯವಾಗಿಲ್ಲ.

ಗುರುವಾರ ಮುಂಜಾನೆ ರಾಷ್ಟ್ರೀಯ ಹೆದ‌್ದಾರಿ 63ರ ಮೇಲೆ ಈ ಅವಘಡ ಸಂಭವಿಸಿದೆ.

ಬಸ್ (KA 51-AD 5836) ಮುಂಬೈಯಿಂದ 28 ಪ್ರಯಾಣಿಕರೊಂದಿಗೆ ಮಂಗಳೂರಿಗೆ ತೆರಳುತ್ತಿತ್ತು. ಸ್ಲೀಪರ್‌ ಕೋಚ್ ಆಗಿರುವ ಈ ಬಸ್, ಪಟ್ಟಣದ ಮಾರುತಿ ದೇವಸ್ಥಾನದ ಎದುರಿನ ಘಟ್ಟದ ರಸ್ತೆ ಹತ್ತುತ್ತಿದ್ದಂತೆ, ಹಿಂಬದಿಯ ಟೈರ್ ಸ್ಫೋಟವಾಯಿತು. ಬ್ಯಾಟರಿ ಶಾರ್ಟ್ ಸರ್ಕೀಟ್ ಆಗಿ ಬೆಂಕಿ ತಗುಲಿರಬಹುದೆಂದು ಅಂದಾಜಿಸಲಾಗಿದೆ.

ಟೈರ ಸ್ಫೋಟವಾದ ಬಳಿಕ ಬಸ್ ಸ್ವಲ್ಪ ದೂರ ಚಲಿಸಿದೆ. ಆಗ ಬೆಂಕಿ ಇಡೀ ಬಸ್‌ಗೆ ಆವರಿಸಿದೆ. ಕೂಡಲೇ ಪ್ರಯಾಣಿಕರನ್ನು ಬಸ್‌ನಿಂದ ಕೆಳಗೆ ಇಳಿಸಲಾಯಿತು. ಸ್ಲೀಪಿಂಗ್ ಕೋಚ್ ಬಸ್‌ನಲ್ಲಿ ಬಹಳಷ್ಟು ಪ್ರಯಾಣಿಕರು ಗಾಢನಿದ್ದೆಯಲ್ಲಿದ್ದರು.

ಬಸ್‌ನಲ್ಲಿದ್ದ ಪ್ರಯಾಣಿಕರೊಬ್ಬರು ಅವಘಡವನ್ನು ಗಮನಿಸಿ ಬಸ್‌ನ ಸಿಬ್ಬಂದಿಯನ್ನು ಎಚ್ಚರಿಸಿದರು. ಕೂಡಲೇ ಎಲ್ಲರನ್ನೂ ಕೆಳಗಿಳಿಸುವಲ್ಲಿ ಯಶಸ್ವಿಯಾದರು. ಸ್ವಲ್ಪ ತಡವಾಗಿದ್ದರೂ ಭಾರಿ ಅನಾಹುತವಾಗುವ ಸಾಧ್ಯತೆಯಿತ್ತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಸ್ಥಳಕ್ಕೆ ಬಂದ ಅಗ್ನಿಶಾಮಕ ದಳದವರು ಬೆಂಕಿಯನ್ನು ನಂದಿಸುವ ಪ್ರಯತ್ನ ಮಾಡಿದರು. ಆದರೆ, ಅದಾಗಲೇ ಬಸ್ ಸಂಪೂರ್ಣ ಸುಟ್ಟು ಕರಕಲಾಗಿತ್ತು. ಬಸ್‌ನಲ್ಲಿದ್ದ ಪ್ರಯಾಣಿಕರನ್ನು ಅವರವರ ಊರಿಗೆ ಬೇರೆ ಬಸ್‌ಗಳಲ್ಲಿ ಕಳುಹಿಸುವ ವ್ಯವಸ್ಥೆ ಮಾಡಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT