ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಾಚಾರ್ ವರದಿ ಜಾರಿಯಾಗಲಿ:ಫಯಾಜ್

Last Updated 27 ಮಾರ್ಚ್ 2018, 7:01 IST
ಅಕ್ಷರ ಗಾತ್ರ

ಧರ್ಮಪುರ: ಮುಸ್ಲಿಂ ಸಮುದಾಯದ ಅಭಿವೃದ್ಧಿಗೆ ನ್ಯಾಯಮೂರ್ತಿ ರಾಜಿಂದರ್ ಸಾಚಾರ್ ಆಯೋಗದ ವರದಿ ಜಾರಿಯಾಗಬೇಕು ಎಂದು ಅಂಬೇಡ್ಕರ್ ಸೇನೆಯ ಅಲ್ಪಾಸಂಖ್ಯಾತ ಘಟಕದ ಅಧ್ಯಕ್ಷ ಡಿ.ವಿ.ಎಸ್.ಫಯಾಜ್  ಒತ್ತಾಯಿಸಿದ್ದಾರೆ.

ಹೋಬಳಿಯ ವಿವಿಧ ಗ್ರಾಮಗಳಿಗೆ ತೆರಳಿ ಸಾಚಾರ್ ವರದಿಯ ಬಗ್ಗೆ ಜಾಗೃತಿ ಮೂಡಿಸಿ ಅವರು ಮಾತನಾಡಿದರು.

ರಾಜಕೀಯ, ಶೈಕ್ಷಣಿಕ, ಆರ್ಥಿಕ ಸೌಲಭ್ಯಗಳು ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲಿ ಮೀಸಲಾತಿ ನೀಡುವ ಸಾಚಾರ್ ವರದಿ ಜಾರಿಗೆ ಕಾಂಗ್ರೆಸ್ ಸೇರಿದಂತೆ ಯಾವ ಪಕ್ಷಗಳು ಇಚ್ಛಾಶಕ್ತಿ ಪ್ರದರ್ಶಿಸುತ್ತಿಲ್ಲ. ಆದ್ದರಿಂದ ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ತಕ್ಕ ಪಾಠ ಕಲಿಸಬೇಕು. ಯಾವ ಪಕ್ಷ ಸಾಚಾರ್ ವರದಿ ಅನುಷ್ಠಾನಕ್ಕೆ ಒಲವು ತೋರುತ್ತದೆಯೋ ಅಂತಹ ಪಕ್ಷವನ್ನು ಬೆಂಬಲಿಸಬೇಕು ಎಂದು ಮನವಿ ಮಾಡಿದರು.

ಅಂಬೇಡ್ಕರ್ ಸೇನೆ ಜಿಲ್ಲಾಧ್ಯಕ್ಷ ರಂಗಸ್ವಾಮಿ, ವಾಸಿಂಅಕ್ರಮ್, ಮೆಹಬೂಬ್, ಮೊಹಿದ್ದೀನ್, ಜಬೀವುಲ್ಲಾ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT