ಕೋವಿಡ್ 19 ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಪ್ರತಿವರ್ಷ ಸಹಸ್ರಾರು ಜನರು ಸೇರುತ್ತಿದ್ದ ಇಲ್ಲಿನ ನಿಲೇಕಣಿಯ ಸುಬ್ರಹ್ಮಣ್ಯೇಶ್ವರ ದೇವಾಲಯದಲ್ಲಿ ಸಾರ್ವಜನಿಕರ ಪ್ರವೇಶವನ್ನು ನಿಷೇಧಿಸಲಾಗಿತ್ತು. ದೇವಾಲಯಕ್ಕೆ ತೆರಳುವ ಬಾಗಿಲು ಬಂದಾಗಿತ್ತು. ಭಕ್ತರು ಹೊರ ಆವರಣದಲ್ಲಿದ್ದ ನಾಗರ ಕಲ್ಲಿಗೆ ಹಾಲೆರೆದು, ಹಣ್ಣು–ಕಾಯಿ ಅರ್ಪಿಸಿ ಪೂಜೆ ಸಲ್ಲಿಸಿದರು. ದೇವಾಲಯಗಳಲ್ಲಿ ಜನರ ಪ್ರವೇಶಕ್ಕೆ ಅವಕಾಶವಿಲ್ಲದೇ, ವೈದಿಕರು ಧಾರ್ಮಿಕ ಆಚರಣೆಗಳನ್ನು ನಡೆಸಿದರು.