ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ನಮ್ಮನೆ ಪುರಸ್ಕಾರ’ ಪ್ರಕಟ

Last Updated 17 ನವೆಂಬರ್ 2020, 21:25 IST
ಅಕ್ಷರ ಗಾತ್ರ

ಶಿರಸಿ: ವಿಶ್ವಶಾಂತಿ ಸೇವಾ ಟ್ರಸ್ಟ ಕರ್ನಾಟಕ ನೀಡುವ ‘ನಮ್ಮನೆ ಪುರಸ್ಕಾರ’ಕ್ಕೆ ಪ್ರಸಿದ್ಧ ಯಕ್ಷಗಾನ ಕಲಾವಿದ ಸಾಗರ ತಾಲ್ಲೂಕಿನ ಬಿಳಿಯೂರಿನ ಸಂಜಯಕುಮಾರ, ಸಿದ್ದಾಪುರ ತಾಲ್ಲೂಕಿನ ನಾಣಿಕಟ್ಟ ಸಮೀಪದ ಗೋರ್ನಮನೆಯ ನಾಗಪತಿ ಹೆಗಡೆ ಹಾಗೂ ಯುವ ಕ್ರೀಡಾಪಟು ಶಿರಸಿಯ ರಕ್ಷಿತ್ ರವಿಂದ್ರ ನಾಯ್ಕ ಆಯ್ಕೆಯಾಗಿದ್ದಾರೆ.

ಪತ್ರಿಕಾ ಪ್ರಕಟಣೆ ನೀಡಿರುವ ಟ್ರಸ್ಟ್‌ನ ಕಾರ್ಯದರ್ಶಿ ಗಾಯತ್ರೀ ರಾಘವೇಂದ್ರ, ‘ಪ್ರಶಸ್ತಿಯನ್ನು ಶಿರಸಿ ಬೆಟ್ಟಕೊಪ್ಪದಲ್ಲಿ ಡಿಸೆಂಬರ್ 13ರಂದು ಪ್ರದಾನ ಮಾಡಲಾಗುವುದು. ಈ ಸಮಾರಂಭಕ್ಕೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್.ನಾಗಾಭರಣ, ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಪ್ರೊ.ಎಂ.ಎ.ಹೆಗಡೆ, ‘ಪ್ರಜಾವಾಣಿ’ಯ ಕಾರ್ಯನಿರ್ವಾಹಕ ಸಂಪಾದಕ ರವೀಂದ್ರ ಭಟ್ಟ ಐನಕೈ, ವಿ.ಉಮಾಕಾಂತ ಭಟ್ಟ ಕೆರೇಕೈ ಅವರನ್ನು ಆಹ್ವಾನಿಸಲಾಗಿದೆ. ಅಧ್ಯಕ್ಷತೆಯನ್ನು ಟ್ರಸ್ಟನ ಅಧ್ಯಕ್ಷೆ, ಹಿರಿಯ ಸಾಹಿತಿ ಭುವನೇಶ್ವರಿ ಹೆಗಡೆ ವಹಿಸಿಕೊಳ್ಳಲಿದ್ದಾರೆ' ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT