<p><strong>ಶಿರಸಿ</strong>: ಅಧಿಕಾರಕ್ಕೆ ಬಂದ ಎಂಟು ವರ್ಷಗಳಲ್ಲಿ ದೇಶದ ಸಾಲವನ್ನು ಮೂರುಪಟ್ಟು ಹೆಚ್ಚಳ ಮಾಡಿದ್ದೇ ಪ್ರಧಾನಿ ನರೇಂದ್ರ ಮೋದಿ ಸಾಧನೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಟೀಕಿಸಿದರು.</p>.<p>ಗುರುವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ಮೋದಿ ಅಧಿಕಾರಕ್ಕೆ ಬರುವ ಮುನ್ನ ದೇಶದ ಸಾಲ ₹53 ಲಕ್ಷ ಕೋಟಿಯಷ್ಟಿತ್ತು. ಈಗ ಅದು ₹155 ಲಕ್ಷ ಕೋಟಿಗೆ ತಲುಪಿದೆ. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಪ್ರತಿ ವರ್ಷ ₹70 ಸಾವಿರ ಕೋಟಿ ಸಾಲ ಮಾಡುತ್ತಿದೆ. ಇದು ಜನರ ಮೇಲೆ ಆರ್ಥಿಕ ಹೊರೆಯಾಗಲು ಕಾರಣವಾಗಿದೆ’ ಎಂದರು.</p>.<p>‘ವಿಶ್ವ ಆರ್ಥಿಕ ಸಮ್ಮೇಳನದಲ್ಲಿ ಮುಖ್ಯಮಂತ್ರಿ ಭಾಗಿಯಾದ ಮಾತ್ರಕ್ಕೆ ಬಂಡವಾಳ ಹರಿದು ಬರುವುದಿಲ್ಲ. ಶಾಂತಿ, ಸುವ್ಯವಸ್ಥೆ ನೆಲೆಸಿದ್ದರೆ ಮಾತ್ರ ಹೂಡಿಕೆದಾರರನ್ನು ಆಕರ್ಷಿಸಬಹುದು. ಈ ನಿಟ್ಟಿನಲ್ಲಿ ಸರ್ಕಾರ ಗಂಭೀರವಾಗಿ ಗಮನ ಹರಿಸಬೇಕು. ಕೋಮು ದ್ವೇಷ ಹರಡುವವರನ್ನು ಬಂಧಿಸಿ ಕ್ರಮ ಕೈಗೊಳ್ಳಬೇಕು’ ಎಂದರು.</p>.<p>‘ಜೆಡಿಎಸ್ ಜತೆಗಿನ ಮೈತ್ರಿ ಮುಗಿದ ಅಧ್ಯಾಯವಾಗಿದೆ. ಇನ್ನು ಮುಂದೆ ಜೆಡಿಎಸ್ ಜತೆ ಯಾವುದೇ ಸ್ನೇಹ ಇಲ್ಲ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿರಸಿ</strong>: ಅಧಿಕಾರಕ್ಕೆ ಬಂದ ಎಂಟು ವರ್ಷಗಳಲ್ಲಿ ದೇಶದ ಸಾಲವನ್ನು ಮೂರುಪಟ್ಟು ಹೆಚ್ಚಳ ಮಾಡಿದ್ದೇ ಪ್ರಧಾನಿ ನರೇಂದ್ರ ಮೋದಿ ಸಾಧನೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಟೀಕಿಸಿದರು.</p>.<p>ಗುರುವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ಮೋದಿ ಅಧಿಕಾರಕ್ಕೆ ಬರುವ ಮುನ್ನ ದೇಶದ ಸಾಲ ₹53 ಲಕ್ಷ ಕೋಟಿಯಷ್ಟಿತ್ತು. ಈಗ ಅದು ₹155 ಲಕ್ಷ ಕೋಟಿಗೆ ತಲುಪಿದೆ. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಪ್ರತಿ ವರ್ಷ ₹70 ಸಾವಿರ ಕೋಟಿ ಸಾಲ ಮಾಡುತ್ತಿದೆ. ಇದು ಜನರ ಮೇಲೆ ಆರ್ಥಿಕ ಹೊರೆಯಾಗಲು ಕಾರಣವಾಗಿದೆ’ ಎಂದರು.</p>.<p>‘ವಿಶ್ವ ಆರ್ಥಿಕ ಸಮ್ಮೇಳನದಲ್ಲಿ ಮುಖ್ಯಮಂತ್ರಿ ಭಾಗಿಯಾದ ಮಾತ್ರಕ್ಕೆ ಬಂಡವಾಳ ಹರಿದು ಬರುವುದಿಲ್ಲ. ಶಾಂತಿ, ಸುವ್ಯವಸ್ಥೆ ನೆಲೆಸಿದ್ದರೆ ಮಾತ್ರ ಹೂಡಿಕೆದಾರರನ್ನು ಆಕರ್ಷಿಸಬಹುದು. ಈ ನಿಟ್ಟಿನಲ್ಲಿ ಸರ್ಕಾರ ಗಂಭೀರವಾಗಿ ಗಮನ ಹರಿಸಬೇಕು. ಕೋಮು ದ್ವೇಷ ಹರಡುವವರನ್ನು ಬಂಧಿಸಿ ಕ್ರಮ ಕೈಗೊಳ್ಳಬೇಕು’ ಎಂದರು.</p>.<p>‘ಜೆಡಿಎಸ್ ಜತೆಗಿನ ಮೈತ್ರಿ ಮುಗಿದ ಅಧ್ಯಾಯವಾಗಿದೆ. ಇನ್ನು ಮುಂದೆ ಜೆಡಿಎಸ್ ಜತೆ ಯಾವುದೇ ಸ್ನೇಹ ಇಲ್ಲ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>