ಇಲ್ಲಿನ ಟಿ.ಆರ್.ಸಿ. ಸಭಾಭವನದಲ್ಲಿ ಸೋಮವಾರ ಸಹಕಾರ ಭಾರತಿ ಉತ್ತರ ಕನ್ನಡ ಜಿಲ್ಲಾ ಘಟಕ ಆಯೋಜಿಸಿದ್ದ ಅಭ್ಯಾಸ ವರ್ಗದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ‘ದೇಶದ ಜಿಡಿಪಿಯಲ್ಲಿ ಸಹಕಾರ ಕ್ಷೇತ್ರದ ಪಾಲು ದೊಡ್ಡ ಮಟ್ಟದ್ದಿದೆ. ಜಾತಿ, ಹಣ ಬಲದ ಹೊರತಾಗಿ ರಾಷ್ಟ್ರೀಯ ಚಿಂತನೆಯೊಂದಿಗೆ ಸಹಕಾರ ಭಾರತಿ ಸಹಕಾರ ಕ್ಷೇತ್ರವನ್ನು ಗಟ್ಟಿಗೊಳಿಸುವ ಕೆಲಸ ಮಾಡುತ್ತಿದೆ’ ಎಂದರು.