<p><strong>ಶಿರಸಿ: </strong>ಸಾರ್ವಜನಿಕರ ತೆರಿಗೆ ಹಣ ಪೋಲು ಮಾಡುವುದು ಸರ್ಕಾರಿ ಇಲಾಖೆಗಳಿಗೆ ಸಲೀಸು ಎಂಬ ಆರೋಪಕ್ಕೆ ವಿದ್ಯಾನಗರದಲ್ಲಿ ಕಳೆದ ವರ್ಷ ಕರಾವಳಿ ಅಭಿವೃದ್ಧಿ ಪ್ರಾಧಿಕಾರದವರು ನಿರ್ಮಿಸಿ, ನಗರಸಭೆಗೆ ಹಸ್ತಾಂತರಿಸಿದ ಕಟ್ಟಡವೇ ಸಾಕ್ಷಿಯಾಗಿದೆ!</p>.<p>ಯಲ್ಲಾಪುರ ರಸ್ತೆಯ ಪಕ್ಕ ಈ ಕಟ್ಟಡವನ್ನು ₹20 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗಿದೆ. ಕರಾವಳಿ ಪ್ರಾಧಿಕಾರದ ಅನುದಾನದಲ್ಲಿ ನಿರ್ಮಾಣಗೊಂಡ ಕಟ್ಟಡವನ್ನು ಕಳೆದ ಫೆ.5 ರಂದು ನಗರಸಭೆಗೆ ಹಸ್ತಾಂತರಿಸಲಾಗಿತ್ತು. ವಾಣಿಜ್ಯ ಉದ್ದೇಶಕ್ಕೆ ನೀಡಲು ಈ ಕಟ್ಟಡ ನಿರ್ಮಾಣಗೊಂಡಿದೆ.</p>.<p>‘ಒಂಬತ್ತು ತಿಂಗಳು ಕಳೆಯುತ್ತ ಬಂದರೂ ಬಾಡಿಗೆ ನೀಡುವ ಪ್ರಕ್ರಿಯೆ ನಡೆದಿಲ್ಲ. ಇದರಿಂದ ಲಕ್ಷಾಂತರ ರೂಪಾಯಿ ನಷ್ಟವಾಗಿ, ತೆರಿಗೆ ಹಣ ಅನಗತ್ಯವಾಗಿ ಪೋಲಾದಂತಾಗುತ್ತದೆ. ಇದಕ್ಕೆ ಆಸ್ಪದ ನೀಡಬಾರದು’ ಎನ್ನುತ್ತಾರೆ ನಗರಸಭೆ ಸದಸ್ಯ ಕಿರಣ್ ಶೆಟ್ಟಿ.</p>.<p>‘ಕಟ್ಟಡ ಖಾಲಿ ಇರುವ ಕಾರಣಕ್ಕೆ ಅಲ್ಲಿ ಅಕ್ರಮ ಚಟುವಟಿಕೆಗೆ ಆಸ್ಪದ ನೀಡಿದಂತಾಗಿದೆ. ಮದ್ಯವ್ಯಸನಿಗಳು ಇಲ್ಲಿ ಕುಡಿದು ಬಾಟಲಿಗಳನ್ನು ಎಸೆದು ಹೋಗುತ್ತಿದ್ದಾರೆ. ಲಕ್ಷಾಂತರ ವೆಚ್ಚ ಮಾಡಿ ಇಂತಹ ಚಟುವಟಿಕೆಗಳಿಗೆ ಅವಕಾಶ ನೀಡುವ ಅಗತ್ಯವಿತ್ತೇ’ ಎಂಬುದು ಅವರ ಪ್ರಶ್ನೆ.</p>.<p>‘ಮೊದಲಿದ್ದ ಮೀನು ಮಾರುಕಟ್ಟೆ ತೆರವುಗೊಳಿಸಿ ಈ ಕಟ್ಟಡ ನಿರ್ಮಿಸಲಾಗಿದೆ. ಆದರೆ ಕಟ್ಟಡದ ಎದುರು ಜಲ್ಲಿಕಲ್ಲು, ಮರಳಿನ ರಾಶಿ ಸುರಿಯಲಾಗುತ್ತಿದೆ. ಇದ್ದೂ ಬಳಕೆಗೆ ಇಲ್ಲದಂತಾಗಿಸುವ ಬದಲು, ಕಟ್ಟಡವನ್ನು ಬಾಡಿಗೆಗೆ ನೀಡುವಂತಾಗಬೇಕು’ ಎಂದು ಒತ್ತಾಯಿಸಿದರು.</p>.<p>‘ಕಟ್ಟಡ ಹಸ್ತಾಂತರಗೊಂಡ ಬೆನ್ನಲ್ಲೇ ಕೊರೊನಾ ಕಾರಣಕ್ಕೆ ಲಾಕ್ಡೌನ್ ಆಯಿತು. ಇದರಿಂದ ಕಟ್ಟಡವನ್ನು ಬಾಡಿಗೆಗೆ ನೀಡುವ ಪ್ರಕ್ರಿಯೆಗೆ ಹಿನ್ನಡೆ ಉಂಟಾಯಿತು’ ಎಂದು ಪೌರಾಯುಕ್ತ ರಮೇಶ ನಾಯಕ ಪ್ರತಿಕ್ರಿಯಿಸಿದರು.</p>.<p>‘ನಗರಸಭೆ ಸಾಮಾನ್ಯಸಭೆಯಲ್ಲಿ ಕಟ್ಟಡ ಬಾಡಿಗೆ ನೀಡುವ ಬಗ್ಗೆ ಚರ್ಚಿಸಿ ಒಪ್ಪಿಗೆ ಪಡೆಯಲಾಗಿದೆ. ಕಟ್ಟಡದ ಬಾಡಿಗೆ ಮೌಲ್ಯದ ಬಗ್ಗೆ ವರದಿ ನೀಡಲು ನಿರ್ಮಿತಿ ಕೇಂದ್ರಕ್ಕೆ ಪತ್ರ ಬರೆಯಲಾಗಿದೆ’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿರಸಿ: </strong>ಸಾರ್ವಜನಿಕರ ತೆರಿಗೆ ಹಣ ಪೋಲು ಮಾಡುವುದು ಸರ್ಕಾರಿ ಇಲಾಖೆಗಳಿಗೆ ಸಲೀಸು ಎಂಬ ಆರೋಪಕ್ಕೆ ವಿದ್ಯಾನಗರದಲ್ಲಿ ಕಳೆದ ವರ್ಷ ಕರಾವಳಿ ಅಭಿವೃದ್ಧಿ ಪ್ರಾಧಿಕಾರದವರು ನಿರ್ಮಿಸಿ, ನಗರಸಭೆಗೆ ಹಸ್ತಾಂತರಿಸಿದ ಕಟ್ಟಡವೇ ಸಾಕ್ಷಿಯಾಗಿದೆ!</p>.<p>ಯಲ್ಲಾಪುರ ರಸ್ತೆಯ ಪಕ್ಕ ಈ ಕಟ್ಟಡವನ್ನು ₹20 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗಿದೆ. ಕರಾವಳಿ ಪ್ರಾಧಿಕಾರದ ಅನುದಾನದಲ್ಲಿ ನಿರ್ಮಾಣಗೊಂಡ ಕಟ್ಟಡವನ್ನು ಕಳೆದ ಫೆ.5 ರಂದು ನಗರಸಭೆಗೆ ಹಸ್ತಾಂತರಿಸಲಾಗಿತ್ತು. ವಾಣಿಜ್ಯ ಉದ್ದೇಶಕ್ಕೆ ನೀಡಲು ಈ ಕಟ್ಟಡ ನಿರ್ಮಾಣಗೊಂಡಿದೆ.</p>.<p>‘ಒಂಬತ್ತು ತಿಂಗಳು ಕಳೆಯುತ್ತ ಬಂದರೂ ಬಾಡಿಗೆ ನೀಡುವ ಪ್ರಕ್ರಿಯೆ ನಡೆದಿಲ್ಲ. ಇದರಿಂದ ಲಕ್ಷಾಂತರ ರೂಪಾಯಿ ನಷ್ಟವಾಗಿ, ತೆರಿಗೆ ಹಣ ಅನಗತ್ಯವಾಗಿ ಪೋಲಾದಂತಾಗುತ್ತದೆ. ಇದಕ್ಕೆ ಆಸ್ಪದ ನೀಡಬಾರದು’ ಎನ್ನುತ್ತಾರೆ ನಗರಸಭೆ ಸದಸ್ಯ ಕಿರಣ್ ಶೆಟ್ಟಿ.</p>.<p>‘ಕಟ್ಟಡ ಖಾಲಿ ಇರುವ ಕಾರಣಕ್ಕೆ ಅಲ್ಲಿ ಅಕ್ರಮ ಚಟುವಟಿಕೆಗೆ ಆಸ್ಪದ ನೀಡಿದಂತಾಗಿದೆ. ಮದ್ಯವ್ಯಸನಿಗಳು ಇಲ್ಲಿ ಕುಡಿದು ಬಾಟಲಿಗಳನ್ನು ಎಸೆದು ಹೋಗುತ್ತಿದ್ದಾರೆ. ಲಕ್ಷಾಂತರ ವೆಚ್ಚ ಮಾಡಿ ಇಂತಹ ಚಟುವಟಿಕೆಗಳಿಗೆ ಅವಕಾಶ ನೀಡುವ ಅಗತ್ಯವಿತ್ತೇ’ ಎಂಬುದು ಅವರ ಪ್ರಶ್ನೆ.</p>.<p>‘ಮೊದಲಿದ್ದ ಮೀನು ಮಾರುಕಟ್ಟೆ ತೆರವುಗೊಳಿಸಿ ಈ ಕಟ್ಟಡ ನಿರ್ಮಿಸಲಾಗಿದೆ. ಆದರೆ ಕಟ್ಟಡದ ಎದುರು ಜಲ್ಲಿಕಲ್ಲು, ಮರಳಿನ ರಾಶಿ ಸುರಿಯಲಾಗುತ್ತಿದೆ. ಇದ್ದೂ ಬಳಕೆಗೆ ಇಲ್ಲದಂತಾಗಿಸುವ ಬದಲು, ಕಟ್ಟಡವನ್ನು ಬಾಡಿಗೆಗೆ ನೀಡುವಂತಾಗಬೇಕು’ ಎಂದು ಒತ್ತಾಯಿಸಿದರು.</p>.<p>‘ಕಟ್ಟಡ ಹಸ್ತಾಂತರಗೊಂಡ ಬೆನ್ನಲ್ಲೇ ಕೊರೊನಾ ಕಾರಣಕ್ಕೆ ಲಾಕ್ಡೌನ್ ಆಯಿತು. ಇದರಿಂದ ಕಟ್ಟಡವನ್ನು ಬಾಡಿಗೆಗೆ ನೀಡುವ ಪ್ರಕ್ರಿಯೆಗೆ ಹಿನ್ನಡೆ ಉಂಟಾಯಿತು’ ಎಂದು ಪೌರಾಯುಕ್ತ ರಮೇಶ ನಾಯಕ ಪ್ರತಿಕ್ರಿಯಿಸಿದರು.</p>.<p>‘ನಗರಸಭೆ ಸಾಮಾನ್ಯಸಭೆಯಲ್ಲಿ ಕಟ್ಟಡ ಬಾಡಿಗೆ ನೀಡುವ ಬಗ್ಗೆ ಚರ್ಚಿಸಿ ಒಪ್ಪಿಗೆ ಪಡೆಯಲಾಗಿದೆ. ಕಟ್ಟಡದ ಬಾಡಿಗೆ ಮೌಲ್ಯದ ಬಗ್ಗೆ ವರದಿ ನೀಡಲು ನಿರ್ಮಿತಿ ಕೇಂದ್ರಕ್ಕೆ ಪತ್ರ ಬರೆಯಲಾಗಿದೆ’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>