‘ಕೂಲಿ ಕೆಲಸಕ್ಕೆ ಹೋಗುವಾಗ ತಂಗುದಾಣದಲ್ಲಿ ಮಗುವಿನ ಅಳು ಕೇಳಿಸಿತು. ಹತ್ತಿರ ತೆರಳಿ ನೋಡಿದಾಗ ಚೀಲವೊಂದರಲ್ಲಿ ಮಗುವನ್ನು ಸುತ್ತಿ ಬಿಟ್ಟು ಹೋಗಿದ್ದು ಗಮನಕ್ಕೆ ಬಂತು’ ಎಂದು ಮಗು ರಕ್ಷಿಸಿದ ಮಹಿಳೆ ಮಾದೇವಿ ತಿಳಿಸಿದರು.
‘ಅವಧಿಪೂರ್ವ ಜನಿಸಿದ ಶಿಶು ಇದಾಗಿದ್ದು 1.6 ಕೆಜಿ ತೂಕ ಹೊಂದಿದೆ. ಜನಿಸಿ ನಾಲ್ಕು ದಿನ ಆಗಿರಬಹುದು. ಎಡಗೈ ಮುಂಭಾಗದ ಮೂಳೆ ಬೆಳವಣಿಗೆ ಆಗಿಲ್ಲ. ಗಾಳಿ, ಮಳೆಯ ವಾತಾವರಣದಲ್ಲಿದ್ದ ಕಾರಣ ಮಗುವಿನ ಆರೋಗ್ಯ ಹದಗೆಟ್ಟಿದೆ. ಚಿಕಿತ್ಸೆ ನೀಡುತ್ತಿದ್ದು ತಕ್ಷಣವೇ ಅದರ ಆರೋಗ್ಯ ಸ್ಥಿತಿ ಸುಧಾರಣೆ ಬಗ್ಗೆ ಹೇಳಲಾಗದು’ ಎಂದು ಮಕ್ಕಳ ತಜ್ಞ ಡಾ.ಆಶ್ರಿತ್ ಭಟ್ ತಿಳಿಸಿದ್ದಾರೆ.
‘ಮಗುವನ್ನು ಬಿಟ್ಟು ಹೋಗಿರುವವರ ಪತ್ತೆಗೆ ಕ್ರಮವಹಿಸಲಾಗುವುದು.ಸದ್ಯ ಮಗುವಿನ ಆರೋಗ್ಯ ಸುಧಾರಣೆಗೆ ಲಕ್ಷ್ಯ ವಹಿಸಿದ್ದೇವೆ’ ಎಂದು ಶಿಶು ಅಭಿವೃದ್ಧಿ ಅಧಿಕಾರಿ ದತ್ತಾತ್ರೇಯ ಭಟ್ಟ ತಿಳಿಸಿದ್ದಾರೆ.