ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗೋಕರ್ಣ ದೇವಸ್ಥಾನದಲ್ಲಿ ವಸ್ತ್ರಸಂಹಿತೆ ಜಾರಿ

Last Updated 19 ಸೆಪ್ಟೆಂಬರ್ 2020, 15:52 IST
ಅಕ್ಷರ ಗಾತ್ರ

ಗೋಕರ್ಣ: ಇಲ್ಲಿಯ ಮಹಾಬಲೇಶ್ವರ ದೇವಸ್ಥಾನದಲ್ಲಿ ಈಗಾಗಲೇ ಜಾರಿಯಲ್ಲಿದ್ದ ವಸ್ತ್ರಸಂಹಿತೆಯಲ್ಲಿ ಬದಲಾವಣೆ ತರಲಾಗಿದೆ. ಪುರುಷರಿಗೆ ಧೋತಿ ಮತ್ತು ಶಲ್ಯ, ಹೆಂಗಸರಿಗೆ ಸೀರೆ ಅಥವಾ ಚೂಡಿದಾರ ಧರಿಸುವುದು ಕಡ್ಡಾಯ ಮಾಡಲಾಗಿದೆ. ಅವರಿಗೆ ಮಾತ್ರ ದೇವರ ದರ್ಶನಕ್ಕೆ ಅವಕಾಶ ನೀಡಲಾಗಿದೆ.

2018ರಿಂದ ಜಾರಿಯಲ್ಲಿದ್ದ ವಸ್ತ್ರಸಂಹಿತೆಯಲ್ಲಿ ಬರ್ಮುಡಾ ಪ್ಯಾಂಟ್ ಧರಿಸಿ ಬಂದವರಿಗೆ ದೇವಸ್ಥಾನ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿತ್ತು. ಆದರೆ, ಈಗ ಪ್ಯಾಂಟ್ ಧರಿಸಿ ಬಂದವರಿಗೂ ನಿರ್ಬಂಧ ವಿಧಿಸಲಾಗಿದೆ. ಕೇವಲ ಭಾರತೀಯ ಶೈಲಿಯ ಉಡುಪು ಧರಿಸಿದವರು ಮಾತ್ರ ದೇವಸ್ಥಾನ ಪ್ರವೇಶಿಸಬಹುದು ಎಂದು ಆಡಳಿತಾಧಿಕಾರಿ ಜಿ.ಕೆ.ಹೆಗಡೆ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT