ಈ ಸಂಬಂಧ ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ಪ್ರಧಾನ ಕಾರ್ಯದರ್ಶಿ ಖಲೀಮ್ ಅಚ್ರೇಕರ್, ‘ಇತ್ತೀಚೆಗೆ ಉದ್ಯೋಗಾವಕಾಶ ಪಡೆದುಕೊಳ್ಳುವುದು ಅತ್ಯಂತ ಕಠಿಣವಾಗಿದೆ. ಇಂತಹ ಸಂದರ್ಭದಲ್ಲಿಕೆಲವರು ಸ್ಥಾವರದ ಐದು ಮತ್ತು ಆರನೇ ಘಟಕ ಸ್ಥಾಪನೆಗೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಕೈಗಾ, ಮಲ್ಲಾಪುರ ಹಾಗೂ ಕಾರವಾರದ ಮುಗ್ಧ ಜನರಲ್ಲಿ ಗೊಂದಲ ಉಂಟುಮಾಡುತ್ತಿದ್ದಾರೆ’ ಎಂದು ದೂರಿದರು.