‘ಕ್ಷೇತ್ರಕ್ಕೆ ಅನುದಾನ ಸಿಕ್ಕಿಲ್ಲ, ಅಭಿವೃದ್ಧಿಯಾಗಿಲ್ಲವೆಂಬ ಕಾರಣಕ್ಕೆ ರಾಜೀನಾಮೆ ನೀಡಿರುವುದಾಗಿ ಅನರ್ಹಗೊಂಡಿರುವ ಶಾಸಕರ ಹೇಳಿಕೆಯನ್ನು ಒಪ್ಪಲಾಗದು. ಸಚಿವ ಸ್ಥಾನ ಇದ್ದವರು, ನಿಗಮ ಮಂಡಳಿ ಅಧ್ಯಕ್ಷ ಹುದ್ದೆ ದೊರೆತವರು ಸಹ ರಾಜೀನಾಮೆ ನೀಡಿದ್ದಾರೆ. ಯಾವ್ಯಾವ ಕ್ಷೇತ್ರಕ್ಕೆ ಎಷ್ಟು ಅನುದಾನ ನೀಡಿದ್ದಾಗಿ ಹಿಂದಿನ ಮುಖ್ಯಮಂತ್ರಿ ಹೇಳಿದ್ದರು. ಹೀಗಿದ್ದೂ, ಅಭಿವೃದ್ಧಿಯ ನೆಪ ಹೇಳಿ ರಾಜೀನಾಮೆ ನೀಡಿದ್ದು ಸರಿಯಲ್ಲ. ಸಮ್ಮಿಶ್ರ ಸರ್ಕಾರ ಉತ್ತಮ ಆಡಳಿತ ನೀಡಿದೆ’ ಎಂದು ಸಮರ್ಥಿಸಿಕೊಂಡರು.