ಸಿಐಟಿಯು ಬೆಂಬಲಿತ ಆಶಾ ಕಾರ್ಯಕರ್ತೆಯರು, ಅಂಗನವಾಡಿ ನೌಕರರು, ಬಿಸಿಯೂಟ ಸಿಬ್ಬಂದಿ, ಅಂಚೆ ಸಿಬ್ಬಂದಿ, ಔಷಧ ಮಾರಾಟ ಮತ್ತು ವಿತರಕರು, ಹಮಾಲಿ ಕಾರ್ಮಿಕರು ಅಂಚೆ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು. ನಗರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಬೆಲೆ ಏರಿಕೆ ನಿಯಂತ್ರಣದ ಜೊತೆಗೆ ಕಾರ್ಮಿಕ ಸಂಘಟನೆಗಳ ನ್ಯಾಯಯುತ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿದರು.