ಕಾರವಾರದ ಬಸ್ ನಿಲ್ದಾಣದಲ್ಲಿ ಮಧ್ಯಾಹ್ನದವರೆಗೂ ಬಸ್ಗಾಗಿ ಕಾಯುತ್ತಿದ್ದ ಪ್ರಯಾಣಿಕರಲ್ಲಿ ಹಿರಿಯರು, ಮಕ್ಕಳು ಕೂಡ ಇದ್ದರು. ಮಧ್ಯಾಹ್ನದ ವೇಳೆ ಹಸಿವಿನಿಂದ ಕುಳಿತಿದ್ದ ಅವರನ್ನು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಸಿಬ್ಬಂದಿ ಉಪಚರಿಸಿದರು. ನಿಲ್ದಾಣದಲ್ಲಿದ್ದ ಎಲ್ಲ ಪ್ರಯಾಣಿಕರಿಗೆ ಉಪಾಹಾರ, ನೀರು ನೀಡಿ ಹಸಿವು ನೀಗಿಸಿದರು.