ಜಿಲ್ಲೆಯ ಎಲ್ಲ ತಾಲ್ಲೂಕುಗಳಲ್ಲೂ ಅಡಿಕೆ ಕೊಳೆ ರೋಗ ಬಂದ ವರದಿಯ ಹಿನ್ನೆಲೆಯಲ್ಲಿ ತೋಟಗಾರಿಕಾ ಇಲಾಖೆ ಸಮೀಕ್ಷೆ ನಡೆಸಿ, 18,946 ಹೆಕ್ಟೇರ್ ಪ್ರದೇಶದಲ್ಲಿ ಅಡಿಕೆ ಹಾಗೂ 614 ಹೆಕ್ಟೇರ್ ಕಾಳುಮೆಣಸು, ಅತಿವೃಷ್ಟಿಯಿಂದ ಹಾನಿಯಾಗಿರುವ ವರದಿ ಸಿದ್ಧಪಡಿಸಿದೆ. ವಿವಿಧ ತಾಲ್ಲೂಕುಗಳಲ್ಲಿ ಕನಿಷ್ಠ ಶೇ 33ರಿಂದ ಗರಿಷ್ಠ ಶೇ 50ರಷ್ಟು ಬೆಳೆ ಹಾನಿಯಾಗಿರುವುದನ್ನು ಗುರುತಿಸಿದೆ.