'ಪ್ರಜಾವಾಣಿ'ಗೆ ಪ್ರತಿಕ್ರಿಯಿಸಿದ ಅವರು, 'ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಆದ ಬಳಿಕ ನಿಗಮದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದೆ. ಆದರೂ ನಿಗಮದ ವಾಹನವನ್ನು ಬುಧವಾರ ಹುಬ್ಬಳ್ಳಿಯಲ್ಲಿಯೇ ಬಿಟ್ಟು, ಖಾಸಗಿ ವಾಹನದಲ್ಲಿ ಮುಂಡಗೋಡಕ್ಕೆ ಬಂದಿದ್ದೇನೆ. ನಿಗಮದ ಅಧ್ಯಕ್ಷ ಸ್ಥಾನದಿಂದ ಬಿಡುಗಡೆ ಮಾಡಿರುವುದು ಒಳ್ಳೆಯದೇ ಆಗಿದೆ. ಇಲ್ಲವಾದರೆ ಅವರ ಹಂಗಿನಲ್ಲಿ ಇರಬೇಕಾಗಿತ್ತು. ಕಾಂಗ್ರೆಸ್ ಸೇರಲು ದಾರಿ ಈಗ ಸುಗಮವಾಗಿದೆ' ಎಂದು ಹೇಳಿದ್ದಾರೆ.