ಸರ್ಕಾರದ ಇತರ ಇಲಾಖೆಗಳಿಗೆ ಹೋಲಿಕೆ ಮಾಡಿದರೆ ಅತ್ಯಂತ ಕಠಿಣ ಕೆಲಸವನ್ನು ಸಾರಿಗೆ ಇಲಾಖೆಯ ಸಿಬ್ಬಂದಿ ನಿರ್ವಹಿಸುತ್ತಿದ್ದಾರೆ. ಆದ್ದರಿಂದ ಎಲ್ಲರಿಗಿಂತ ಹೆಚ್ಚು ವೇತನ ಮತ್ತು ಸವಲತ್ತುಗಳನ್ನು ನೀಡಬೇಕು. ಅದು ಸರ್ಕಾರದ ಧರ್ಮವಾಗಿದೆ. ಈಗ ಎಲ್ಲರಿಗಿಂತ ಕಡಿಮೆ ವೇತನ ನೀಡುತ್ತಿರುವುದು ಸಾರಿಗೆ ನೌಕರರಿಗೆ ಮಾಡಿದ ದ್ರೋಹವಾಗಿದೆ. ಆದ್ದರಿಂದ ಸರ್ಕಾರಿ ನೌಕರರಿಗೆ ನೀಡುವ ಎಲ್ಲ ಸವಲತ್ತುಗಳನ್ನು ನೀಡಬೇಕು ಎಂದು ಪತ್ರದಲ್ಲಿ ಒತ್ತಾಯಿಸಲಾಗಿದೆ.