’ಪ್ರಜಾವಾಣಿ’ ಕಳೆದ ನವೆಂಬರ್ 14, ಮಕ್ಕಳ ದಿನಾಚರಣೆಯಂದು ‘ಬಣ್ಣದ ಚಿಟ್ಟೆ’ ಶೀರ್ಷಿಕೆಯಡಿ, ಪರಿಚಯಿಸಿದ ಸಾಧಕ ಮಕ್ಕಳಲ್ಲಿ ನಿರಂಜನ ಕೂಡ ಒಬ್ಬನಾಗಿದ್ದ. ಈ ವರದಿ ಓದಿದ್ದ ಸಮಗ್ರ ಶಿಕ್ಷಣ ಕರ್ನಾಟಕದ ಕಾರ್ಯಕ್ರಮ ನಿರ್ದೇಶಕ ಕೆ.ರಾಜು ಮೊಗವೀರ ಅವರು, ವಿದ್ಯಾರ್ಥಿಯಲ್ಲಿರುವ ಮಾನವೀಯ ಮೌಲ್ಯವನ್ನು ಗುರುತಿಸಿ, ಆತನಿಗೆ ಪ್ರಶಂಸಾ ಪತ್ರ ಹಾಗೂ ₹ 3000 ಮೊತ್ತದಠೇವಣಿಪತ್ರವನ್ನು ಕಳುಹಿಸಿಕೊಟ್ಟಿದ್ದರು.