<p>ಶಿರಸಿ: ‘ರೈತರು ಸಮೃದ್ಧಿಯಾಗಿದ್ದರೆ ಮಾತ್ರ ದೇಶ ಸದೃಢವಾಗಿರುತ್ತದೆ. ಕೆಲಸದ ನಿಮಿತ್ತ ಕಚೇರಿಗೆ ಬರುವ ರೈತರನ್ನು ಗೌರವದಿಂದ ಕಾಣಬೇಕು, ಅವರ ಕೆಲಸಗಳನ್ನು ತ್ವರಿತವಾಗಿ ಮಾಡಿಕೊಡಿ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ್ ಅಧಿಕಾರಿಗಳಿಗೆ ಹೇಳಿದರು.</p>.<p>ತಾಲ್ಲೂಕಿನ ಉಂಚಳ್ಳಿ ಗ್ರಾಮ ಪಂಚಾಯ್ತಿ ಆವರಣದಲ್ಲಿ ಮಂಗಳವಾರ ಕೃಷಿ ಅಭಿಯಾನ ಜಾಗೃತಿ ರಥ ಹಾಗೂ ₹5.30 ಕೋಟಿ ವೆಚ್ಚದ ವಿವಿಧ ಕಾಮಗಾರಿಗೆ ಚಾಲನೆ ನೀಡಿದ ಬಳಿಕ ಮಾತನಾಡಿದ ಅವರು, ‘ನೌಕರರು ಬೇಡಿಕೆ ಮುಂದಿಟ್ಟು ಹೋರಾಟ ಮಾಡಿದರೆ ಸರ್ಕಾರ ಮಣಿಯುತ್ತದೆ. ಆದರೆ, ಅನ್ನ ಕೊಡುವ ರೈತ ಎಂದೂ ಪ್ರತಿಭಟನೆಯ ಹಾದಿ ಹಿಡಿದಿಲ್ಲ. ಅವರು ಮುನಿಸಿಕೊಂಡು ಮನೆಯಲ್ಲಿ ಕುಳಿತರೆ ದೇಶಕ್ಕೆ ಉಪವಾಸ ನಿಶ್ಚಿತ’ ಎಂದು ಮಾರ್ಮಿಕವಾಗಿ ಹೇಳಿದರು.</p>.<p>‘ರಾಜ್ಯದಲ್ಲಿ ರೈತಪರ ಸರ್ಕಾರ ಇದೆ. ಅಭಿವೃದ್ಧಿ ದಿಶೆಯಲ್ಲಿಯೂ ಉತ್ತಮ ಕೆಲಸ ಮಾಡಲಾಗುತ್ತಿದ್ದು, ಗ್ರಾಮಾಭಿವೃದ್ಧಿಗೆ ಆದ್ಯತೆ ನೀಡುತ್ತಿದ್ದೇವೆ’ ಎಂದರು.</p>.<p>ಗ್ರಾಮ ಪಂಚಾಯ್ತಿ ಅಧ್ಯಕ್ಷ ದೇವೆಂದ್ರ ನಾಯ್ಕ ಅಧ್ಯಕ್ಷತೆ ವಹಿಸಿದ್ದರು. ಸದಸ್ಯ ಅಣ್ಣಪ್ಪ ನಾಯ್ಕ, ತಾಲ್ಲೂಕು ಪಂಚಾಯ್ತಿ ಸದಸ್ಯೆ ರತ್ನಾ ಶೆಟ್ಟಿ, ಜಿಲ್ಲಾ ಪಂಚಾಯ್ತಿ ಸದಸ್ಯೆ ಉಷಾ ಹೆಗಡೆ, ತಾಲ್ಲೂಕು ಪಂಚಾಯ್ತಿ ಇಒ ಎಫ್.ಜಿ.ಚೆನ್ನಣ್ಣನವರ್, ಪಂಚಾಯತ್ರಾಜ್ ಎಂಜಿನಿಯರಿಂಗ್ ವಿಭಾಗದ ಎಇಇ ರಾಮಚಂದ್ರ ಗಾಂವಕರ, ಮುಖಂಡರಾದ ದ್ಯಾಮಣ್ಣ ದೊಡ್ಮನಿ, ಕೃಷಿಕ ಸಮಾಜದ ಎಸ್.ಎನ್.ಭಟ್, ಕೃಷಿ ಇಲಾಖೆ ಉಪನಿರ್ದೇಶಕ ಎಚ್.ನಟರಾಜ, ಸಹಾಯಕ ನಿರ್ದೇಶಕ ಮಧುಕರ ನಾಯ್ಕ, ತೋಟಗಾರಿಕಾ ಇಲಾಖೆ ಸಹಾಯಕ ನಿರ್ದೇಶಕ ಸತೀಶ ಹೆಗಡೆ ಇದ್ದರು. ಗ್ರಾಮ ಪಂಚಾಯ್ತಿ ಸದಸ್ಯ ಅರುಣ ಕೊಪ್ಪ ಸ್ವಾಗತಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಶಿರಸಿ: ‘ರೈತರು ಸಮೃದ್ಧಿಯಾಗಿದ್ದರೆ ಮಾತ್ರ ದೇಶ ಸದೃಢವಾಗಿರುತ್ತದೆ. ಕೆಲಸದ ನಿಮಿತ್ತ ಕಚೇರಿಗೆ ಬರುವ ರೈತರನ್ನು ಗೌರವದಿಂದ ಕಾಣಬೇಕು, ಅವರ ಕೆಲಸಗಳನ್ನು ತ್ವರಿತವಾಗಿ ಮಾಡಿಕೊಡಿ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ್ ಅಧಿಕಾರಿಗಳಿಗೆ ಹೇಳಿದರು.</p>.<p>ತಾಲ್ಲೂಕಿನ ಉಂಚಳ್ಳಿ ಗ್ರಾಮ ಪಂಚಾಯ್ತಿ ಆವರಣದಲ್ಲಿ ಮಂಗಳವಾರ ಕೃಷಿ ಅಭಿಯಾನ ಜಾಗೃತಿ ರಥ ಹಾಗೂ ₹5.30 ಕೋಟಿ ವೆಚ್ಚದ ವಿವಿಧ ಕಾಮಗಾರಿಗೆ ಚಾಲನೆ ನೀಡಿದ ಬಳಿಕ ಮಾತನಾಡಿದ ಅವರು, ‘ನೌಕರರು ಬೇಡಿಕೆ ಮುಂದಿಟ್ಟು ಹೋರಾಟ ಮಾಡಿದರೆ ಸರ್ಕಾರ ಮಣಿಯುತ್ತದೆ. ಆದರೆ, ಅನ್ನ ಕೊಡುವ ರೈತ ಎಂದೂ ಪ್ರತಿಭಟನೆಯ ಹಾದಿ ಹಿಡಿದಿಲ್ಲ. ಅವರು ಮುನಿಸಿಕೊಂಡು ಮನೆಯಲ್ಲಿ ಕುಳಿತರೆ ದೇಶಕ್ಕೆ ಉಪವಾಸ ನಿಶ್ಚಿತ’ ಎಂದು ಮಾರ್ಮಿಕವಾಗಿ ಹೇಳಿದರು.</p>.<p>‘ರಾಜ್ಯದಲ್ಲಿ ರೈತಪರ ಸರ್ಕಾರ ಇದೆ. ಅಭಿವೃದ್ಧಿ ದಿಶೆಯಲ್ಲಿಯೂ ಉತ್ತಮ ಕೆಲಸ ಮಾಡಲಾಗುತ್ತಿದ್ದು, ಗ್ರಾಮಾಭಿವೃದ್ಧಿಗೆ ಆದ್ಯತೆ ನೀಡುತ್ತಿದ್ದೇವೆ’ ಎಂದರು.</p>.<p>ಗ್ರಾಮ ಪಂಚಾಯ್ತಿ ಅಧ್ಯಕ್ಷ ದೇವೆಂದ್ರ ನಾಯ್ಕ ಅಧ್ಯಕ್ಷತೆ ವಹಿಸಿದ್ದರು. ಸದಸ್ಯ ಅಣ್ಣಪ್ಪ ನಾಯ್ಕ, ತಾಲ್ಲೂಕು ಪಂಚಾಯ್ತಿ ಸದಸ್ಯೆ ರತ್ನಾ ಶೆಟ್ಟಿ, ಜಿಲ್ಲಾ ಪಂಚಾಯ್ತಿ ಸದಸ್ಯೆ ಉಷಾ ಹೆಗಡೆ, ತಾಲ್ಲೂಕು ಪಂಚಾಯ್ತಿ ಇಒ ಎಫ್.ಜಿ.ಚೆನ್ನಣ್ಣನವರ್, ಪಂಚಾಯತ್ರಾಜ್ ಎಂಜಿನಿಯರಿಂಗ್ ವಿಭಾಗದ ಎಇಇ ರಾಮಚಂದ್ರ ಗಾಂವಕರ, ಮುಖಂಡರಾದ ದ್ಯಾಮಣ್ಣ ದೊಡ್ಮನಿ, ಕೃಷಿಕ ಸಮಾಜದ ಎಸ್.ಎನ್.ಭಟ್, ಕೃಷಿ ಇಲಾಖೆ ಉಪನಿರ್ದೇಶಕ ಎಚ್.ನಟರಾಜ, ಸಹಾಯಕ ನಿರ್ದೇಶಕ ಮಧುಕರ ನಾಯ್ಕ, ತೋಟಗಾರಿಕಾ ಇಲಾಖೆ ಸಹಾಯಕ ನಿರ್ದೇಶಕ ಸತೀಶ ಹೆಗಡೆ ಇದ್ದರು. ಗ್ರಾಮ ಪಂಚಾಯ್ತಿ ಸದಸ್ಯ ಅರುಣ ಕೊಪ್ಪ ಸ್ವಾಗತಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>