<p><strong>ಕಾರವಾರ:</strong> ಇನ್ನುಮುಂದೆ ಶೌಚ ಗುಂಡಿ ಸ್ವಚ್ಛಗೊಳಿಸುವಾಗ ಪೌರ ಕಾರ್ಮಿಕರು ಮೃತಪಟ್ಟರೆ ಅಧಿಕಾರಿಗಳನ್ನೇ ನೇರ ಹೊಣೆ ಮಾಡಲಾಗುವುದು. ಇಂತಹ ಪ್ರಕರಣಗಳು ಯಾವುದೇ ಕಾರಣಕ್ಕೂ ಮರುಕಳಿಸಬಾರದು ಎಂದುರಾಷ್ಟ್ರೀಯ ಸಫಾಯಿ ಕರ್ಮಚಾರಿ ಆಯೋಗದ ಸದಸ್ಯ ಜಗದೀಶ ಹಿರೇಮನಿ ಎಚ್ಚರಿಕೆ ನೀಡಿದರು.</p>.<p>ನಗರದಲ್ಲಿ ಸೋಮವಾರ ಸ್ಥಳೀಯ ಸಂಸ್ಥೆಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿ ಅವರುಮಾತನಾಡಿದರು.</p>.<p>ನಗರದಲ್ಲಿ ಈಚೆಗೆ ಖಾಸಗಿ ಕಟ್ಟಡದ ಶೌಚಾಲಯ ಗುಂಡಿ ಸ್ವಚ್ಛಗೊಳಿಸುವಾಗ ಪೌರಕಾರ್ಮಿಕ ಕೋಟಯ್ಯ ಪೆದ್ದಬಾಲಯ್ಯ ಬುನಾದಿ ಮೃತಪಟ್ಟಿರುವುದು ವಿಷಾದನೀಯವಾಗಿದೆ.ಮಲ ಹೊರುವ ಪದ್ಧತಿಯನ್ನು ಸರ್ಕಾರ ಸಂಪೂರ್ಣವಾಗಿ ನಿಷೇಧಿಸಿದ್ದರೂ ಚಾಲ್ತಿಯಲ್ಲಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.</p>.<p>‘ಶೌಚಾಲಯ ಗುಂಡಿ ಸ್ವಚ್ಛಗೊಳಿಸಲು ಪೌರಕಾರ್ಮಿಕ ನೇರವಾಗಿ ಇಳಿಯಬಾರದು. ಈ ಕಾರ್ಯಕ್ಕೆಜೆಟ್ಟಿಂಗ್ ಮಷಿನ್ಗಳನ್ನೇ ಬಳಸಬೇಕು. ಇದಕ್ಕೆ ಸಂಪರ್ಕಿಸಬೇಕಾದ ದೂರವಾಣಿ ಸಂಖ್ಯೆಗಳು ಇರುವ ಕರಪತ್ರಗಳನ್ನು ಮನೆಮನೆಗಳಿಗೆ ಹಂಚಬೇಕು’ ಎಂದು ತಿಳಿಸಿದರು.<br /><br />2022ರ ಒಳಗಾಗಿ ಪೌರ ಕಾರ್ಮಿಕರಿಗೆಸಮಾನ ಕೆಲಸಕ್ಕೆ ಸಮಾನ ವೇತನ, ಆರೋಗ್ಯ ಸೇವೆ, ಸ್ವಂತ ಮನೆ ನಿರ್ಮಾಣ ಹಾಗೂ ಮಕ್ಕಳಿಗೆ ಶಿಕ್ಷಣ ಒದಗಿಸುವ ಉದ್ದೇಶವಿದೆ. ಈ ಹಿನ್ನೆಲೆಯಲ್ಲಿ ಅವರ ಅವಲಂಬಿತರಿಗೆ ಸ್ವಯಂ ಉದ್ಯೋಗ ಕೈಗೊಳ್ಳಲು ₹ 25 ಲಕ್ಷವರೆಗೆ ಸಾಲನೀಡಲಾಗುವುದು’ ಎಂದು ಮಾಹಿತಿ ನೀಡಿದರು.</p>.<p>ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ಕೆ.ಹರೀಶಕುಮಾರ್, ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಾಹಣಾಅಧಿಕಾರಿ ಮೊಹಮ್ಮದ್ ರೋಶನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಪ್ರಕಾಶ ದೇವರಾಜ, ಪೌರಾಯುಕ್ತ ಎಸ್.ಯೋಗೇಶ್ವರ, ಉಪವಿಭಾಗಾಧಿಕಾರಿ ಅಭಿಜಿನ್ ಇದ್ದರು.</p>.<p>20 ದಿನಗಳ ವೈದ್ಯಕೀಯ ರಜೆ ಪಡೆದಿದ್ದ ನಗರಸಭೆಯ ಪೌರಕಾರ್ಮಿಕ ಬಿ.ಕೋಟಯ್ಯಅವರ ಮೃತದೇಹವು ಆ.18ರಂದು ನಗರದ ‘ಅಭಿಮಾನ ಶ್ರೀ’ಅಪಾರ್ಟ್ಮೆಂಟ್ ಆವರಣದಲ್ಲಿ ಪತ್ತೆಯಾಗಿತ್ತು. ಈ ಸಂಬಂಧನಗರ ಪೊಲೀಸ್ ಠಾಣೆಯಲ್ಲಿದೂರುದಾಖಲಾಗಿತ್ತು.</p>.<p class="Subhead">‘ಮತ್ತಿಬ್ಬರವಿರುದ್ಧಪ್ರಕರಣ ದಾಖಲಿಸಿ’: ‘ಕೋಟಯ್ಯ ಅವರ ಸಾವಿಗೆ ಸಂಬಂಧಿಸಿದಂತೆ ಅನಂತ ಶೆಟ್ಟಿ ಎಂಬುವವರನ್ನು ಬಂಧಿಸಲಾಗಿದೆ. ಅವರು ದೂರವಾಣಿ ಕರೆ ಮಾಡಿ ಅಪಾರ್ಟ್ಮೆಂಟ್ಗೆ ಕರೆಸಿಕೊಂಡಿದ್ದರು. ಇದೇರೀತಿ, ಕೋಟಯ್ಯ ಅವರ ಜೊತೆ ಕೆಲಸಕ್ಕೆ ಹೋಗಿದ್ದ ಮತ್ತಿಬ್ಬರು ಪೌರ ಕಾರ್ಮಿಕರ ವಿರುದ್ಧವೂಪ್ರಕರಣ ದಾಖಲಿಸಲು ಸೂಚಿಸಲಾಗಿದೆ’ ಎಂದುಜಗದೀಶ ಹಿರೇಮನಿ ಹೇಳಿದರು.</p>.<p>ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಶೌಚಗುಂಡಿಯನ್ನು ಸ್ವಚ್ಛಗೊಳಿಸಲು ಬರಿಗೈಯಿಂದ ಹೋಗಿದ್ದೇ ತಪ್ಪು. ಅವರು ಕಡ್ಡಾಯವಾಗಿಯಂತ್ರಗಳನ್ನು ತೆಗೆದುಕೊಂಡು ಹೋಗಬೇಕಿತ್ತು.ಈ ನಿಟ್ಟಿನಲ್ಲಿ ಅವರಿಗೆ ತರಬೇತಿ ಕೂಡ ಇರಲಿಲ್ಲ’ ಎಂದು ತಿಳಿಸಿದರು.</p>.<p>‘ಮಲಿನ ನೀರು ಶುದ್ಧೀಕರಣ ಘಟಕ ಸ್ಥಾಪಿಸುವುದಾದರೆ ಮಾತ್ರ10ಕ್ಕಿಂತ ಹೆಚ್ಚಿನ ಮನೆಗಳು ಇರುವ ಕಟ್ಟಡದ ನಿರ್ಮಾಣಕ್ಕೆ ಅನುಮತಿ ನೀಡಬೇಕು. ದೊಡ್ಡ ಬಂಗಲೆಗಳು, ಕಟ್ಟಡಗಳ ಸಮೀಕ್ಷೆ ಮಾಡಿ ಪಟ್ಟಿ ಮಾಡುವಂತೆಯೂ ಸೂಚಿಸಲಾಗಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾರವಾರ:</strong> ಇನ್ನುಮುಂದೆ ಶೌಚ ಗುಂಡಿ ಸ್ವಚ್ಛಗೊಳಿಸುವಾಗ ಪೌರ ಕಾರ್ಮಿಕರು ಮೃತಪಟ್ಟರೆ ಅಧಿಕಾರಿಗಳನ್ನೇ ನೇರ ಹೊಣೆ ಮಾಡಲಾಗುವುದು. ಇಂತಹ ಪ್ರಕರಣಗಳು ಯಾವುದೇ ಕಾರಣಕ್ಕೂ ಮರುಕಳಿಸಬಾರದು ಎಂದುರಾಷ್ಟ್ರೀಯ ಸಫಾಯಿ ಕರ್ಮಚಾರಿ ಆಯೋಗದ ಸದಸ್ಯ ಜಗದೀಶ ಹಿರೇಮನಿ ಎಚ್ಚರಿಕೆ ನೀಡಿದರು.</p>.<p>ನಗರದಲ್ಲಿ ಸೋಮವಾರ ಸ್ಥಳೀಯ ಸಂಸ್ಥೆಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿ ಅವರುಮಾತನಾಡಿದರು.</p>.<p>ನಗರದಲ್ಲಿ ಈಚೆಗೆ ಖಾಸಗಿ ಕಟ್ಟಡದ ಶೌಚಾಲಯ ಗುಂಡಿ ಸ್ವಚ್ಛಗೊಳಿಸುವಾಗ ಪೌರಕಾರ್ಮಿಕ ಕೋಟಯ್ಯ ಪೆದ್ದಬಾಲಯ್ಯ ಬುನಾದಿ ಮೃತಪಟ್ಟಿರುವುದು ವಿಷಾದನೀಯವಾಗಿದೆ.ಮಲ ಹೊರುವ ಪದ್ಧತಿಯನ್ನು ಸರ್ಕಾರ ಸಂಪೂರ್ಣವಾಗಿ ನಿಷೇಧಿಸಿದ್ದರೂ ಚಾಲ್ತಿಯಲ್ಲಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.</p>.<p>‘ಶೌಚಾಲಯ ಗುಂಡಿ ಸ್ವಚ್ಛಗೊಳಿಸಲು ಪೌರಕಾರ್ಮಿಕ ನೇರವಾಗಿ ಇಳಿಯಬಾರದು. ಈ ಕಾರ್ಯಕ್ಕೆಜೆಟ್ಟಿಂಗ್ ಮಷಿನ್ಗಳನ್ನೇ ಬಳಸಬೇಕು. ಇದಕ್ಕೆ ಸಂಪರ್ಕಿಸಬೇಕಾದ ದೂರವಾಣಿ ಸಂಖ್ಯೆಗಳು ಇರುವ ಕರಪತ್ರಗಳನ್ನು ಮನೆಮನೆಗಳಿಗೆ ಹಂಚಬೇಕು’ ಎಂದು ತಿಳಿಸಿದರು.<br /><br />2022ರ ಒಳಗಾಗಿ ಪೌರ ಕಾರ್ಮಿಕರಿಗೆಸಮಾನ ಕೆಲಸಕ್ಕೆ ಸಮಾನ ವೇತನ, ಆರೋಗ್ಯ ಸೇವೆ, ಸ್ವಂತ ಮನೆ ನಿರ್ಮಾಣ ಹಾಗೂ ಮಕ್ಕಳಿಗೆ ಶಿಕ್ಷಣ ಒದಗಿಸುವ ಉದ್ದೇಶವಿದೆ. ಈ ಹಿನ್ನೆಲೆಯಲ್ಲಿ ಅವರ ಅವಲಂಬಿತರಿಗೆ ಸ್ವಯಂ ಉದ್ಯೋಗ ಕೈಗೊಳ್ಳಲು ₹ 25 ಲಕ್ಷವರೆಗೆ ಸಾಲನೀಡಲಾಗುವುದು’ ಎಂದು ಮಾಹಿತಿ ನೀಡಿದರು.</p>.<p>ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ಕೆ.ಹರೀಶಕುಮಾರ್, ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಾಹಣಾಅಧಿಕಾರಿ ಮೊಹಮ್ಮದ್ ರೋಶನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಪ್ರಕಾಶ ದೇವರಾಜ, ಪೌರಾಯುಕ್ತ ಎಸ್.ಯೋಗೇಶ್ವರ, ಉಪವಿಭಾಗಾಧಿಕಾರಿ ಅಭಿಜಿನ್ ಇದ್ದರು.</p>.<p>20 ದಿನಗಳ ವೈದ್ಯಕೀಯ ರಜೆ ಪಡೆದಿದ್ದ ನಗರಸಭೆಯ ಪೌರಕಾರ್ಮಿಕ ಬಿ.ಕೋಟಯ್ಯಅವರ ಮೃತದೇಹವು ಆ.18ರಂದು ನಗರದ ‘ಅಭಿಮಾನ ಶ್ರೀ’ಅಪಾರ್ಟ್ಮೆಂಟ್ ಆವರಣದಲ್ಲಿ ಪತ್ತೆಯಾಗಿತ್ತು. ಈ ಸಂಬಂಧನಗರ ಪೊಲೀಸ್ ಠಾಣೆಯಲ್ಲಿದೂರುದಾಖಲಾಗಿತ್ತು.</p>.<p class="Subhead">‘ಮತ್ತಿಬ್ಬರವಿರುದ್ಧಪ್ರಕರಣ ದಾಖಲಿಸಿ’: ‘ಕೋಟಯ್ಯ ಅವರ ಸಾವಿಗೆ ಸಂಬಂಧಿಸಿದಂತೆ ಅನಂತ ಶೆಟ್ಟಿ ಎಂಬುವವರನ್ನು ಬಂಧಿಸಲಾಗಿದೆ. ಅವರು ದೂರವಾಣಿ ಕರೆ ಮಾಡಿ ಅಪಾರ್ಟ್ಮೆಂಟ್ಗೆ ಕರೆಸಿಕೊಂಡಿದ್ದರು. ಇದೇರೀತಿ, ಕೋಟಯ್ಯ ಅವರ ಜೊತೆ ಕೆಲಸಕ್ಕೆ ಹೋಗಿದ್ದ ಮತ್ತಿಬ್ಬರು ಪೌರ ಕಾರ್ಮಿಕರ ವಿರುದ್ಧವೂಪ್ರಕರಣ ದಾಖಲಿಸಲು ಸೂಚಿಸಲಾಗಿದೆ’ ಎಂದುಜಗದೀಶ ಹಿರೇಮನಿ ಹೇಳಿದರು.</p>.<p>ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಶೌಚಗುಂಡಿಯನ್ನು ಸ್ವಚ್ಛಗೊಳಿಸಲು ಬರಿಗೈಯಿಂದ ಹೋಗಿದ್ದೇ ತಪ್ಪು. ಅವರು ಕಡ್ಡಾಯವಾಗಿಯಂತ್ರಗಳನ್ನು ತೆಗೆದುಕೊಂಡು ಹೋಗಬೇಕಿತ್ತು.ಈ ನಿಟ್ಟಿನಲ್ಲಿ ಅವರಿಗೆ ತರಬೇತಿ ಕೂಡ ಇರಲಿಲ್ಲ’ ಎಂದು ತಿಳಿಸಿದರು.</p>.<p>‘ಮಲಿನ ನೀರು ಶುದ್ಧೀಕರಣ ಘಟಕ ಸ್ಥಾಪಿಸುವುದಾದರೆ ಮಾತ್ರ10ಕ್ಕಿಂತ ಹೆಚ್ಚಿನ ಮನೆಗಳು ಇರುವ ಕಟ್ಟಡದ ನಿರ್ಮಾಣಕ್ಕೆ ಅನುಮತಿ ನೀಡಬೇಕು. ದೊಡ್ಡ ಬಂಗಲೆಗಳು, ಕಟ್ಟಡಗಳ ಸಮೀಕ್ಷೆ ಮಾಡಿ ಪಟ್ಟಿ ಮಾಡುವಂತೆಯೂ ಸೂಚಿಸಲಾಗಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>