‘ದೇವಬಾಗದಲ್ಲಿ ಕಡಲಾಮೆ ಮೊಟ್ಟೆಯಿಟ್ಟಿದ್ದು 10 ವರ್ಷಗಳ ನಂತರ ಈ ವರ್ಷ ದಾಖಲಾಗಿದೆ. ಡಿ.ಸಿ.ಎಫ್ ಡಾ.ವಸಂತ ರೆಡ್ಡಿ ಅವರ ಮಾರ್ಗದರ್ಶನದಲ್ಲಿ ಮೊಟ್ಟೆಗಳನ್ನು ರಕ್ಷಿಸಲು ಕ್ರಮ ಕೈಗೊಳ್ಳಲಾಗಿದೆ. ಮೊಟ್ಟೆಗಳಿರುವ ಪ್ರದೇಶದಲ್ಲಿ ಗೂಡು ನಿರ್ಮಿಸಲಾಗಿದೆ. ಅರಣ್ಯ ಇಲಾಖೆಯ ಸಿಬ್ಬಂದಿ ರಾತ್ರಿ ಹಗಲು ಕಾವಲು ಕಾಯಲಿದ್ದಾರೆ. 45 ದಿನಗಳ ಬಳಿಕ ಮೊಟ್ಟೆಯೊಡೆದು ಮರಿಗಳು ಹೊರ ಬರುತ್ತವೆ. ಬಳಿಕ ಅವುಗಳನ್ನು ಸಮುದ್ರಕ್ಕೆ ಬಿಡಲಾಗುವುದು’ ಎಂದು ವಲಯ ಅರಣ್ಯ ಸಂರಕ್ಷಣಾಧಿಕಾರಿ (ಮರೈನ್ ವಿಭಾಗ) ಪ್ರಮೋದ್ ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ.