ಒಟ್ಟು 10,227 ವಿದ್ಯಾರ್ಥಿಗಳು ಈ ಬಾರಿ ಪರೀಕ್ಷೆಗೆ ಹಾಜರಾಗಿದ್ದರು. ಕೋವಿಡ್ ಲಾಕ್ಡೌನ್ ಕಾರಣದಿಂದ ಭೌತಿಕ ತರಗತಿಗಳು ನಡೆದಿರಲಿಲ್ಲ. ಪರೀಕ್ಷೆಯೂ ಅನಿಶ್ಚಿತವಾಗಿತ್ತು. ಬದಲಾದ ಪರೀಕ್ಷಾ ಪದ್ಧತಿಯಲ್ಲಿ ಬಹು ಆಯ್ಕೆ ಮಾದರಿಯ ಪ್ರಶ್ನೆ ಪತ್ರಿಕೆಗಳನ್ನು ಪರಿಚಯಿಸಲಾಗಿತ್ತು. ಅಲ್ಲದೇ ಪರೀಕ್ಷೆಗೆ ಹಾಜರಾದ ಎಲ್ಲ ವಿದ್ಯಾರ್ಥಿಗಳನ್ನೂ ಉತ್ತೀರ್ಣರಾಗುತ್ತಾರೆ ಎಂದು ಶಿಕ್ಷಣ ಇಲಾಖೆ ತಿಳಿಸಿತ್ತು. ಅದರ ಪ್ರಕಾರ ಜಿಲ್ಲೆಯ ಎಲ್ಲ ವಿದ್ಯಾರ್ಥಿಗಳೂ ಪಿ.ಯು.ಗೆ ಬಡ್ತಿ ಪಡೆದಿದ್ದಾರೆ.