ವಿಜಯಾ ಬ್ಯಾಂಕ್ ಶಾಖೆಯ ಸಹಾಯಕ ವ್ಯವಸ್ಥಾಪಕ ಅಪ್ಪು ಪಾಟೀಲ ಅವರಿಗೆ ಮನವಿ ಸಲ್ಲಿಸಿದರು. ಹಲವಾರು ವರ್ಷಗಳಿಂದ ಗ್ರಾಹಕರಾಗಿರುವ ಅನೇಕರಿಗೆ ಈ ಬ್ಯಾಂಕ್ ಶಾಖೆಯಿಂದ ಅನುಕೂಲಗಳಾಗಿವೆ. ಇಲ್ಲಿನ ವ್ಯವಹಾರ ಕೂಡ ಉತ್ತಮ ರೀತಿಯಲ್ಲಿ ನಡೆಯುತ್ತಿದೆ. ಈಗ ಏಕಾಏಕಿ ಬ್ಯಾಂಕ್ಗಳ ವಿಲೀನ ಪ್ರಕ್ರಿಯೆ ನೆಪವೊಡ್ಡಿ, ಈ ಶಾಖೆಯನ್ನು ಹೊಸಪೇಟೆ ರಸ್ತೆಯಲ್ಲಿರುವ ಬ್ಯಾಂಕ್ ಆಫ್ ಬರೋಡಾ ಶಾಖೆಗೆ ವರ್ಗಾಯಿಸುತ್ತಿರುವುದು ವ್ಯವಹಾರದ ದೃಷ್ಟಿಯಿಂದ ತೊಂದರೆಯಾಗುತ್ತದೆ. ಬ್ಯಾಂಕ್ ಆಫ್ ಬರೋಡಾ ಶಾಖೆ ಇರುವಲ್ಲಿ ಈಗಾಗಲೇ ಇನ್ನೆರಡು ಬ್ಯಾಂಕ್ ಇರುವುದರಿಂದ ವ್ಯವಹಾರ ಅಷ್ಟಾಗಿ ನಡೆಯುವುದಿಲ್ಲ. ಒಂದೊಮ್ಮೆ ಈ ಶಾಖೆಯನ್ನು ಅಲ್ಲಿಗೆ ಸ್ಥಳಾಂತರಿಸಿದರೆ, ಇಲ್ಲಿರುವ ಗ್ರಾಹಕರು, ಈ ಬ್ಯಾಂಕ್ ಖಾತೆಯನ್ನು ರದ್ದುಗೊಳಿಸಲು ತೀರ್ಮಾನಿಸಿದ್ದಾರೆ. ಇದರಿಂದ ಬ್ಯಾಂಕ್ಗೆ ನಷ್ಟವಾಗುತ್ತದೆ. ಪ್ರಸ್ತುತ ಇರುವ ವಿಜಯಾ ಬ್ಯಾಂಕ್ ಶಾಖೆಯು ಬಸ್ ನಿಲ್ದಾಣಕ್ಕೂ ಹತ್ತಿರವಿದೆ. ಹೀಗಾಗಿ ಇದನ್ನು ಇಲ್ಲಿಯೇ ಉಳಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.