ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಡಿಕೆ ತೋಟದಲ್ಲಿ ಕಾರ್ಮಿಕನಿಗೆ ಮಾಲೀಕನಿಂದ ಗುಂಡೇಟು

Last Updated 7 ಜನವರಿ 2022, 6:03 IST
ಅಕ್ಷರ ಗಾತ್ರ

ಶಿರಸಿ: ಅಡಿಕೆ ತೋಟದಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕನ ಮೇಲೆ ಮಾಲೀಕ ಗುಂಡು ಹಾರಿಸಿದ ಘಟನೆ ತಾಲ್ಲೂಕಿನ ಬಕ್ಕಳದಲ್ಲಿ ನಡೆದಿದೆ.

ಆರೋಪಿ ದೇವರು ಪರಮೇಶ್ವರ ಭಟ್ಟ (67) ಗುಂಡು ಹಾರಿಸಿದ ಆರೋಪಿ. ಅವರ ತೋಟದಲ್ಲಿ ಕೆಲಸ ಮಾಡುತ್ತಿದ್ದ ಔಡಾಳದ ಕೇಶವ ರಾಮಾ ಮರಾಠಿ (27) ಗಾಯಗೊಂಡ ಕಾರ್ಮಿಕ.

ಮಂಗಗಳ ಕಾಟ ತಡೆಯಲು ಗುಂಡು ಹಾರಿಸುತ್ತಿದ್ದ ವೇಳೆ ಅದು ಕಾರ್ಮಿಕನಿಗೆ ತಗುಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಗಾಯಾಳುವನ್ನು ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆರೋಪಿ ತಲೆಮರೆಸಿಕೊಂಡಿದ್ದು ಅವರನ್ನು ಶೀಘ್ರ ವಶಕ್ಕೆ ಪಡೆಯುವುದಾಗಿ ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT