‘ಪರಿಹಾರಕ್ಕೆ ಅರ್ಜಿ ಸಲ್ಲಿಸುವ ರೈತರು ತಮ್ಮ ಪಹಣಿ, ಆಧಾರ್ ಪ್ರತಿ, ಬ್ಯಾಂಕ್ ಪಾಸ್ ಬುಕ್ ಪ್ರತಿಗಳನ್ನು ಕೊಡಬೇಕು. ಆದರೆ, ಹೆಚ್ಚಿನ ಕೃಷಿಕರು ಬೇರೆಯವರ ಜಮೀನು ಗೇಣಿ ಆಧಾರದ ಮೇಲೆ ಕೃಷಿ ಮಾಡಿದ್ದಾರೆ. ಆದ್ದರಿಂದ ಜಮೀನು ಮಾಲೀಕರ ಭೂ ದಾಖಲೆಗಳನ್ನು ಕೊಡಬೇಕಾಗುತ್ತದೆ. ಆಗ ಪರಿಹಾರವು ಭೂ ಮಾಲೀಕರ ಬ್ಯಾಂಕ್ ಖಾತೆಗೆ ಜಮಾ ಆಗುತ್ತದೆ. ಇದು ಪರಿಹಾರ ವಿತರಣೆಯ ತಾಂತ್ರಿಕ ಸಮಸ್ಯೆಯಾಗಿದೆ’ ಎಂದು ಅವರು ವಿವರಿಸಿದ್ದಾರೆ.