<p><strong>ಗೋಕರ್ಣ: </strong>ಮಾಘಮಾಸದ ಅಮವಾಸ್ಯೆಯ ದಿನ ಭಾನುವಾರದಂದು ಗೋಕರ್ಣದಲ್ಲಿ ಸಾವಿರಾರು ಭಕ್ತರು ಸಮುದ್ರ ತೀರದಲ್ಲಿ ಪಡಿ ಸಮರ್ಪಿಸಿ ಕೃತಾರ್ಥರಾದರು.</p>.<p>ಕೆಲವರು ಸಮುದ್ರದಲ್ಲಿ ಸ್ನಾನ ಮಾಡಿ ದಡದಲ್ಲಿ ಸಾಲಾಗಿ ಕುಳಿತಿದ್ದ ಭಿಕ್ಷುಕರಿಗೆ ಅಕ್ಕಿ, ಹಣ ನೀಡಿದ್ದು ಕಂಡು ಬಂದಿತು. ಇನ್ನು ಕೆಲವರು ಮುಡಿ ಸಮರ್ಪಿಸಿ, ಪಡಿ ನೀಡಿ ಧನ್ಯರಾದರು. ಈ ಪದ್ಧತಿ ಪರಂಪರಾಗತವಾಗಿ ನಡೆದುಕೊಂಡು ಬಂದಿದೆ. ಸುತ್ತಮುತ್ತಲಿನ ಹಳ್ಳಿಯ ಜನರೆಲ್ಲ ತಪ್ಪದೇ ಪಡಿ ಹಾಕುವ ಈ ಪದ್ಧತಿಯನ್ನು ಮುಂದುವರೆಸಿಕೊಂಡು ಬಂದಿದ್ದಾರೆ.</p>.<p>ಗೋಕರ್ಣ ಪವಿತ್ರ ಕ್ಷೇತ್ರವಾದ್ದರಿಂದ, ತಮ್ಮ ಪಿತೃಗಳ ಸಂತೃಪ್ತಿಗೋಸ್ಕರ ಸಮುದ್ರದಲ್ಲಿ ಸ್ನಾನ ಮಾಡಿ ತೆಂಗಿನಕಾಯಿ, ಅಕ್ಕಿ, ಹಣವನ್ನು ದಾನ ಮಾಡುವ ಪದ್ಧತಿ ಮೊದಲಿನಿಂದ ರೂಢಿಯಲ್ಲಿ ಬೆಳೆದು ಬಂದಿದೆ. ಅದರಂತೆ ಪ್ರತಿ ಕುಟುಂಬದವರು ಇದನ್ನು ಅನುಸರಿಸುತ್ತಾರೆ.</p>.<p><strong>ತಿಲ ತರ್ಪಣ: </strong>ಮೂರು ತಲೆಮಾರಿನ ಪಿತೃಗಳಿಗೆ ಸಮುದ್ರ ದಂಡೆಯಲ್ಲಿ ತಿಲ ತರ್ಪಣ ನೀಡುವುದು ನಡೆದು ಬಂದ ಪದ್ಧತಿ. ಅದೇ ರೀತಿ ಭಾನುವಾರ ಸುತ್ತಮುತ್ತಲಿನ ಹಳ್ಳಿಯ ಜನರು, ಪುರೋಹಿತರ ಸಹಾಯದೊಂದಿಗೆ ತಮ್ಮ ಪೂರ್ವಜರಿಗೆ ತರ್ಪಣ, ಪಿಂಡಪ್ರಧಾನ ಮಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗೋಕರ್ಣ: </strong>ಮಾಘಮಾಸದ ಅಮವಾಸ್ಯೆಯ ದಿನ ಭಾನುವಾರದಂದು ಗೋಕರ್ಣದಲ್ಲಿ ಸಾವಿರಾರು ಭಕ್ತರು ಸಮುದ್ರ ತೀರದಲ್ಲಿ ಪಡಿ ಸಮರ್ಪಿಸಿ ಕೃತಾರ್ಥರಾದರು.</p>.<p>ಕೆಲವರು ಸಮುದ್ರದಲ್ಲಿ ಸ್ನಾನ ಮಾಡಿ ದಡದಲ್ಲಿ ಸಾಲಾಗಿ ಕುಳಿತಿದ್ದ ಭಿಕ್ಷುಕರಿಗೆ ಅಕ್ಕಿ, ಹಣ ನೀಡಿದ್ದು ಕಂಡು ಬಂದಿತು. ಇನ್ನು ಕೆಲವರು ಮುಡಿ ಸಮರ್ಪಿಸಿ, ಪಡಿ ನೀಡಿ ಧನ್ಯರಾದರು. ಈ ಪದ್ಧತಿ ಪರಂಪರಾಗತವಾಗಿ ನಡೆದುಕೊಂಡು ಬಂದಿದೆ. ಸುತ್ತಮುತ್ತಲಿನ ಹಳ್ಳಿಯ ಜನರೆಲ್ಲ ತಪ್ಪದೇ ಪಡಿ ಹಾಕುವ ಈ ಪದ್ಧತಿಯನ್ನು ಮುಂದುವರೆಸಿಕೊಂಡು ಬಂದಿದ್ದಾರೆ.</p>.<p>ಗೋಕರ್ಣ ಪವಿತ್ರ ಕ್ಷೇತ್ರವಾದ್ದರಿಂದ, ತಮ್ಮ ಪಿತೃಗಳ ಸಂತೃಪ್ತಿಗೋಸ್ಕರ ಸಮುದ್ರದಲ್ಲಿ ಸ್ನಾನ ಮಾಡಿ ತೆಂಗಿನಕಾಯಿ, ಅಕ್ಕಿ, ಹಣವನ್ನು ದಾನ ಮಾಡುವ ಪದ್ಧತಿ ಮೊದಲಿನಿಂದ ರೂಢಿಯಲ್ಲಿ ಬೆಳೆದು ಬಂದಿದೆ. ಅದರಂತೆ ಪ್ರತಿ ಕುಟುಂಬದವರು ಇದನ್ನು ಅನುಸರಿಸುತ್ತಾರೆ.</p>.<p><strong>ತಿಲ ತರ್ಪಣ: </strong>ಮೂರು ತಲೆಮಾರಿನ ಪಿತೃಗಳಿಗೆ ಸಮುದ್ರ ದಂಡೆಯಲ್ಲಿ ತಿಲ ತರ್ಪಣ ನೀಡುವುದು ನಡೆದು ಬಂದ ಪದ್ಧತಿ. ಅದೇ ರೀತಿ ಭಾನುವಾರ ಸುತ್ತಮುತ್ತಲಿನ ಹಳ್ಳಿಯ ಜನರು, ಪುರೋಹಿತರ ಸಹಾಯದೊಂದಿಗೆ ತಮ್ಮ ಪೂರ್ವಜರಿಗೆ ತರ್ಪಣ, ಪಿಂಡಪ್ರಧಾನ ಮಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>