ಯಕ್ಷಸಿರಿ ವಾರ್ಷಿಕ ಪ್ರಶಸ್ತಿಯನ್ನು ಮಂಗಳೂರಿನ ಹರಿನಾರಾಯಣ ಬೈಪಾಡಿತ್ತಾಯ, ಸಂಜಯ್ ಕುಮಾರ್ ಶೆಟ್ಟಿ, ಕುಂದಾಪುರದ ಗೋಪಾಲ ಆಚಾರ್ಯ, ಬೇಲ್ತೂರು ರಮೇಶ್, ಉಡುಪಿಯ ಆವರ್ಸೆ ಶ್ರೀನಿವಾಸ ದುಡಿಪಾಳ, ಕುಂದಾಪುರದ ಸುಬ್ರಹ್ಮಣ್ಯ ಧಾರೇಶ್ವರ, ಬಂಟ್ವಾಳದ ವಿಟ್ಲ ಶಂಭು ಶರ್ಮ, ಶಿರಸಿಯ ಎಂ.ಆರ್.ಹೆಗಡೆ ಕಾನಗೋಡ, ಶಿರಾ ತಾಲ್ಲೂಕಿನ ಹನುಮಂತರಾಯಪ್ಪ, ಕೋಲಾರದ ಎ.ಎಂ.ಮುಳವಾಗಲಪ್ಪ ಅವರಿಗೆ ಪ್ರದಾನ ಮಾಡಲಾಯಿತು.