<p><strong>ಕಾರವಾರ</strong>: ‘ಪಿಂಚಣಿದಾರರಿಗೆ ಅನುಕೂಲವಾಗುವಂತೆ ಹೋಬಳಿ ಮಟ್ಟದಲ್ಲಿ ಡಿ.1ರಿಂದ ಪಿಂಚಣಿ ಅದಾಲತ್ ಹಮ್ಮಿಕೊಳ್ಳಲು ಸೂಚನೆ ನೀಡಲಾಗಿದೆ’ ಎಂದು ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ ತಿಳಿಸಿದರು.</p>.<p>ನಗರದಲ್ಲಿ ಸೋಮವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಗ್ರಾಮೀಣ ಭಾಗದಲ್ಲಿರುವ ಫಲಾನುಭವಿಗಳಿಗೂ ಸೌಲಭ್ಯಗಳು ಸೂಕ್ತ ರೀತಿಯಲ್ಲಿ ಸಿಗಬೇಕು ಎಂಬ ಉದ್ದೇಶವು ರಾಜ್ಯ ಸರ್ಕಾರದ್ದಾಗಿದೆ. ಹಾಗಾಗಿ ಪಿಂಚಣಿ ಅದಾಲತ್ ಆಯೋಜಿಸಲು ತಹಶೀಲ್ದಾರರಿಗೆ ತಿಳಿಸಲಾಗಿದೆ. ಅವರೇ ಅದರ ನೇತೃತ್ವ ವಹಿಸಲಿದ್ದಾರೆ’ ಎಂದರು.</p>.<p>‘ಕಳೆದ ತಿಂಗಳು ಹಮ್ಮಿಕೊಳ್ಳಲಾದ ಕಾರ್ಮಿಕ ಅದಾಲತ್ನಿಂದ ರಾಜ್ಯದಲ್ಲಿ ಹಲವು ವರ್ಷಗಳಿಂದ ಬಾಕಿಯಿದ್ದ 2.61 ಲಕ್ಷ ಅರ್ಜಿಗಳಲ್ಲಿ 2.38 ಲಕ್ಷ ಅರ್ಜಿಗಳ ವಿಲೇವಾರಿ ಆಗಿದೆ. ಕೇವಲ 23 ಸಾವಿರ ಅರ್ಜಿಗಳು ಈಗ ವಿಲೇವಾರಿ ಆಗಬೇಕಾಗಿದ್ದು, ಅವುಗಳಲ್ಲಿ ಹಲವು ನ್ಯಾಯಾಲಯದಲ್ಲಿವೆ’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾರವಾರ</strong>: ‘ಪಿಂಚಣಿದಾರರಿಗೆ ಅನುಕೂಲವಾಗುವಂತೆ ಹೋಬಳಿ ಮಟ್ಟದಲ್ಲಿ ಡಿ.1ರಿಂದ ಪಿಂಚಣಿ ಅದಾಲತ್ ಹಮ್ಮಿಕೊಳ್ಳಲು ಸೂಚನೆ ನೀಡಲಾಗಿದೆ’ ಎಂದು ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ ತಿಳಿಸಿದರು.</p>.<p>ನಗರದಲ್ಲಿ ಸೋಮವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಗ್ರಾಮೀಣ ಭಾಗದಲ್ಲಿರುವ ಫಲಾನುಭವಿಗಳಿಗೂ ಸೌಲಭ್ಯಗಳು ಸೂಕ್ತ ರೀತಿಯಲ್ಲಿ ಸಿಗಬೇಕು ಎಂಬ ಉದ್ದೇಶವು ರಾಜ್ಯ ಸರ್ಕಾರದ್ದಾಗಿದೆ. ಹಾಗಾಗಿ ಪಿಂಚಣಿ ಅದಾಲತ್ ಆಯೋಜಿಸಲು ತಹಶೀಲ್ದಾರರಿಗೆ ತಿಳಿಸಲಾಗಿದೆ. ಅವರೇ ಅದರ ನೇತೃತ್ವ ವಹಿಸಲಿದ್ದಾರೆ’ ಎಂದರು.</p>.<p>‘ಕಳೆದ ತಿಂಗಳು ಹಮ್ಮಿಕೊಳ್ಳಲಾದ ಕಾರ್ಮಿಕ ಅದಾಲತ್ನಿಂದ ರಾಜ್ಯದಲ್ಲಿ ಹಲವು ವರ್ಷಗಳಿಂದ ಬಾಕಿಯಿದ್ದ 2.61 ಲಕ್ಷ ಅರ್ಜಿಗಳಲ್ಲಿ 2.38 ಲಕ್ಷ ಅರ್ಜಿಗಳ ವಿಲೇವಾರಿ ಆಗಿದೆ. ಕೇವಲ 23 ಸಾವಿರ ಅರ್ಜಿಗಳು ಈಗ ವಿಲೇವಾರಿ ಆಗಬೇಕಾಗಿದ್ದು, ಅವುಗಳಲ್ಲಿ ಹಲವು ನ್ಯಾಯಾಲಯದಲ್ಲಿವೆ’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>