‘ನಾನು ಬುದ್ಧಿವಂತ ಸ್ಪೀಕರ್ ಅಲ್ಲದೇ ಇರಬಹುದು, ಆದರೆ ಸರ್ವಾನುಮತದಿಂದ ಆಯ್ಕೆಯಾದ ಸ್ಪೀಕರ್ ಆಗಿ ಕೆಲಸ ಮಾಡಿದ್ದೇನೆ. ಕೊನೆ ಉಸಿರು ಇರುವವರೆಗೂ ಸಂವಿಧಾನಕ್ಕೆ ನನ್ನ ನಿಷ್ಠೆ ಇರುತ್ತದೆ. ನಿಷ್ಠೆಗೆ ದ್ರೋಹ ಮಾಡುವ ವ್ಯಕ್ತಿ ನಾನಲ್ಲ’ ಎಂದು ಅನರ್ಹ ಶಾಸಕರಿಗೆ ತಿರುಗೇಟು ನೀಡಿದರು. ವಿಧಾನ ಪರಿಷತ್ ಸದಸ್ಯ ನಜೀರ್ ಅಹ್ಮದ್, ಕಾಂಗ್ರೆಸ್ ಸಾಮಾಜಿಕ ಜಾಲತಾಣದ ನವ್ಯಶ್ರೀ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣ ಹಿರೇಹಳ್ಳಿ ಇದ್ದರು.