ಶಿರಸಿ: ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಹೆಚ್ಚು ಸ್ಥಾನ ಗಳಿಸಿರುವುದು ಉತ್ತಮ ಆಡಳಿತಕ್ಕೆ ಜನ ಬೆಂಬಲಿಸುತ್ತಾರೆ ಎಂಬುದರ ಸಂಕೇತ ಎಂದು ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್ ಹೇಳಿದರು.
ನಗರದಲ್ಲಿ ಸೋಮವಾರ ಮಾಧ್ಯಮದವರೊಡನೆ ಮಾತನಾಡಿದ ಅವರು, 'ಬಿಜೆಪಿ ಸರಕಾರ ಬಂದಮೇಲೆ ಸಾಕಷ್ಟು ಅಭಿವೃದ್ಧಿ ಕಾರ್ಯವಾಗಿದೆ. ಹೀಗಾಗಿ ಬೆಳಗಾವಿಯಲ್ಲಿ ಬಿಜೆಪಿ ಆಡಳಿತಕ್ಕೆ ಬರುವ ನಿರೀಕ್ಷೆ ಇತ್ತು. ಹುಬ್ಬಳ್ಳಿ ಧಾರವಾಡ ಪಾಲಿಕೆಯಲ್ಲೂ ಹೆಚ್ಚು ಸ್ಥಾನ ಗಳಿಸಿ ಹ್ಯಾಟ್ರಿಕ್ ಸಾಧಿಸಿದ್ದೆವೆ' ಎಂದರು.
'ಪಾಲಿಕೆ ಚುನಾವಣೆ ಫಲಿತಾಂಶ ಮುಂಬರುವ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ ಆಗಲಿದೆ' ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಪ್ರತಿಕ್ರಿಸಿಯಿಸಿದರು.