ಕೊರೊನಾ ಸೋಂಕು ಹರಡದಂತೆ ತಡೆಯಲು ಜಿಲ್ಲಾಡಳಿತ ಮತ್ತು ವಕ್ಫ್ ಬೋರ್ಡ್ ಮುಂಜಾಗ್ರತಾ ಕ್ರಮವಾಗಿ ರಂಜಾನ್ ಸಂದರ್ಭದಲ್ಲಿ ಮಸೀದಿ ಮತ್ತು ಮನೆಗಳಲ್ಲಿ ಸಾಮೂಹಿಕ ಪ್ರಾರ್ಥನೆ, ಝಕಾತ್, ಇಫ್ತಿಯಾರ್ ಕೂಟ ಏರ್ಪಡಿಸುವುದನ್ನು ನಿರ್ಬಂಧಿಸಿ ತಿಳಿವಳಿಕೆ ನೀಡಿದೆ. ಈ ಆದೇಶವನ್ನು ಉಲ್ಲಂಘಿಸಿ, ಯಾವುದೇ ಸುರಕ್ಷತಾ ಕ್ರಮಗಳನ್ನು ಅನುಸರಿಸದೇ, ಹಣ ದಾನ ಮಾಡುತ್ತ, ಅನವಶ್ಯಕವಾಗಿ ತಿರುಗುತ್ತಿದ್ದ ಈ ವ್ಯಕ್ತಿಯನ್ನು ಬಂಧಿಸಲಾಗಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.