ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗಮನ ಸೆಳೆದ ದೂಧ್‌ಸಾಗರ್ ದೃಶ್ಯಕಾವ್ಯ

Last Updated 29 ನವೆಂಬರ್ 2021, 16:01 IST
ಅಕ್ಷರ ಗಾತ್ರ

ಕಾರವಾರ: ನಗರದ ಯುವಕ ರೋಹನ್ ಕುಡಾಲ್ಕರ್ ಎಂಬುವವರು ಕ್ಯಾಮೆರಾದಲ್ಲಿ ಸೆರೆಹಿಡಿದ, ಪ್ರಸಿದ್ಧ ಪ್ರವಾಸಿ ತಾಣ ದೂಧ್‌ಸಾಗರ್‌ನ ಚಿತ್ರವೊಂದು ವಿಶ್ವದಾದ್ಯಂತ ಮೆಚ್ಚುಗೆಗೆ ಪಾತ್ರವಾಗಿದೆ.

ಬೆಟ್ಟದ ಮೇಲಿನಿಂದ ಧುಮ್ಮಿಕ್ಕುವ ನೀರಿನ ಸಮೀಪದಲ್ಲಿ ಸಾಗುತ್ತಿರುವ ರೈಲಿನ ಚಿತ್ರವನ್ನು ಅವರು ಕ್ಲಿಕ್ಲಿಸಿದ್ದರು. ಅದನ್ನು ಸಾಮಾಜಿಕ ಜಾಲತಾಣ ‘ಇನ್‌ಸ್ಟಾಗ್ರಾಂ’ನ ತಮ್ಮ ಖಾತೆಯಲ್ಲಿ ಪ್ರಕಟಿಸಿದ್ದರು. ಅದನ್ನು ಲಕ್ಷಾಂತರ ಮಂದಿ ‘ಶೇರ್’ ಮಾಡಿಕೊಂಡಿದ್ದಾರೆ.

ಕೇಂದ್ರ ಸರ್ಕಾರದ ‘ಇನ್‌ಕ್ರೆಡಿಬಲ್ ಇಂಡಿಯಾ’ ಯೋಜನೆಯ ಅಧಿಕೃತ ಟ್ವಿಟರ್ ಖಾತೆ, ಪ್ರವಾಸೋದ್ಯಮಕ್ಕೆ ಸಂಬಂಧಿಸಿದ ‘ಟ್ರಿಪ್ ಟು ದ ಕಮ್ಯುನಿಟಿ’, ‘ಟ್ರಾವೆಲ್ ಇಂಡಿಯಾ’ ಸೇರಿದಂತೆ ಹಲವಾರು ಸಂಘ ಸಂಸ್ಥೆಗಳ ಸಾಮಾಜಿಕ ಜಾಲತಾಣಗಳ ಪುಟಗಳಲ್ಲೂ ಈ ಚಿತ್ರ ಪ್ರಕಟವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT