ಶಿರಸಿ: ಕೆಲದಿನ ಬಂದಾಗಿದ್ದ ತಾಲ್ಲೂಕಿನ ಬನವಾಸಿಯ ಅನಾನಸ್ ಸಂಸ್ಕರಣಾ ಘಟಕವು ಕಾರ್ಯಾರಂಭ ಮಾಡಿದೆ. ತಹಶೀಲ್ದಾರ್ ಎಂ.ಆರ್.ಕುಲಕರ್ಣಿ ಅವರು ಶನಿವಾರ ಘಟಕಕ್ಕೆ ಭೇಟಿ ನೀಡಿ, ಅಲ್ಲಿನ ವ್ಯವಸ್ಥೆ ಪರಿಶೀಲಿಸಿದರು.
ಅನಾನಸ್ ಬೆಳೆಗಾರರಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ಘಟಕವನ್ನು ತೆರೆಯಲಾಗಿದೆ. ಇಲ್ಲಿ 105 ಕಾರ್ಮಿಕರು ಕೆಲಸ ಮಾಡುತ್ತಿದ್ದಾರೆ. ಕೋವಿಡ್–19 ಹಿನ್ನೆಲೆಯಲ್ಲಿ ಎಲ್ಲ ರೀತಿಯ ಮುನ್ನೆಚ್ಚರಿಕೆ ಕ್ರಮ ವಹಿಸುವಂತೆ ಸೂಚಿಸಲಾಗಿದೆ. ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ತಿಳಿಸಲಾಗಿದೆ ಎಂದು ಕುಲಕರ್ಣಿ ಹೇಳಿದ್ದಾರೆ.