ಮದ್ಯ ಸೇವಿಸಿದ್ದ ಆತ, ತನ್ನ ಕಾರಿನಲ್ಲಿ ಅಲ್ಲಿಂದ ಪರಾರಿಯಾದ. ಅವನನ್ನು ಪೊಲೀಸರು ಬೆನ್ನತ್ತಿದ್ದಂತೆ ಕಾರನ್ನು ಮತ್ತಷ್ಟು ವೇಗವಾಗಿ ಚಲಾಯಿಸಿಕೊಂಡು ಸಾಗಿದ. ಎದುರಿಗೆ ಸಿಕ್ಕಿದ ವಾಹನಗಳು, ಕಾಂಪೌಂಡ್ಗೂ ಕಾರನ್ನು ಡಿಕ್ಕಿ ಹೊಡೆಸಿ ತಪ್ಪಿಸಿಕೊಳ್ಳಲು ಪ್ರಯತ್ನಿಸಿದ. ಈ ವಿಚಾರ ಗೊತ್ತಾಗಿ ನಗರ ಠಾಣೆ ಇನ್ಸ್ಪೆಕ್ಟರ್ ಸಂತೋಷಕುಮಾರ್, ಹಬ್ಬುವಾಡ ರಸ್ತೆಯ ಗೀತಾಂಜಲಿ ಟಾಕೀಸ್ ಬಳಿ ರಸ್ತೆಗೆ ಅಡ್ಡಲಾಗಿ ಬ್ಯಾರಿಕೇಡ್ ಅಳವಡಿಸಿ ತಡೆಯಲು ಮುಂದಾದರು.