<p><strong>ಶಿರಸಿ: </strong>ತಾಲ್ಲೂಕಿನ ಮಣ್ಕಣಿ ಗ್ರಾಮದಲ್ಲಿ ಶನಿವಾರ ರಾತ್ರಿ ಅಡಿಕೆ ಕಳ್ಳತನ ಪ್ರಕರಣ ಯತ್ನ ನಡೆದ ಹಿನ್ನೆಲೆಯಲ್ಲಿ ಗ್ರಾಮೀಣ ಠಾಣೆ ಪೊಲೀಸರು ಮತ್ತಿಗಾರ, ನೇರ್ಲವಳ್ಳಿ ಭಾಗದ ರೈತರೊಂದಿಗೆ ಸೋಮವಾರ ಕೊಳಗಿಬೀಸಿನಲ್ಲಿ ಜನಸಂಪರ್ಕ ಸಭೆ ನಡೆಸಿದರು.</p>.<p>‘ಕಳ್ಳತನ ಯತ್ನ ಪ್ರಕರಣ ಗಂಭಿರವಾಗಿ ಪರಿಗಣಿಸಲಾಗಿದೆ. ತಪ್ಪಿತಸ್ಥರನ್ನು ಶೀಘ್ರ ಬಂಧಿಸಲಾಗುವದು. ರೈತರು ಆತಂಕಕ್ಕೆ ಒಳಗಾಗಬಾರದು’ ಎಂದು ಎಸ್ಐ ಡಿ.ಎಸ್.ಈರಯ್ಯ ಹೇಳಿದರು.</p>.<p>‘ಗ್ರಾಮಗಳಿಗೆ ಭೇಟಿ ನೀಡುವ ಅಪರಿಚಿತರು, ಸಂಶಯಾಸ್ಪದ ವ್ಯಕ್ತಿಗಳ ಬಗ್ಗೆ ನಿಗಾ ಇಡಬೇಕು. ಸಂಶಯಗಳಿದ್ದರೆ ತಕ್ಷಣವೆ ಪೊಲೀಸರಿಗೆ ಮಾಹಿತಿ ನೀಡಿ’ ಎಂದು ಸೂಚಿಸಿದರು.</p>.<p>ಗ್ರಾಮೀಣ ಭಾಗದಲ್ಲಿ ರಾತ್ರಿ ವೇಳೆ ಪೊಲೀಸ್ ಸಿಬ್ಬಂದಿ ನಿರಂತರ ಗಸ್ತು ತಿರುಗುವಂತಾಗಬೇಕು. ಒಬ್ಬ ಸಿಬ್ಬಂದಿ ಬದಲು ಹೆಚ್ಚು ಜನರನ್ನು ನೇಮಿಸಿ ಎಂದು ರೈತರು ಒತ್ತಾಯಿಸಿದರು.</p>.<p>ನೆಗ್ಗು ಗ್ರಾಮ ಪಂಚಾಯ್ತಿ ಸದಸ್ಯ ಚಂದ್ರಕಾಂತ ಹೆಗಡೆ ನೇರ್ಲದ್ದ, ಉಮಾಪತಿ ಭಟ್ ಮತ್ತಿಗಾರ, ಗುರುಪಾದ ಹೆಗಡೆ ಬೊಮ್ನಳ್ಳಿ, ರವಿ ಹೆಗಡೆ ಹೊಸ್ಮನೆ, ಶ್ರೀಧರ ಹೆಗಡೆ ಇಳ್ಳುಮನೆ, ಶ್ರಿಪತಿ ಹೆಗಡೆ ನೇರ್ಲದ್ದ, ಪೊಲೀಸ್ ಸಿಬ್ಬಂದಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿರಸಿ: </strong>ತಾಲ್ಲೂಕಿನ ಮಣ್ಕಣಿ ಗ್ರಾಮದಲ್ಲಿ ಶನಿವಾರ ರಾತ್ರಿ ಅಡಿಕೆ ಕಳ್ಳತನ ಪ್ರಕರಣ ಯತ್ನ ನಡೆದ ಹಿನ್ನೆಲೆಯಲ್ಲಿ ಗ್ರಾಮೀಣ ಠಾಣೆ ಪೊಲೀಸರು ಮತ್ತಿಗಾರ, ನೇರ್ಲವಳ್ಳಿ ಭಾಗದ ರೈತರೊಂದಿಗೆ ಸೋಮವಾರ ಕೊಳಗಿಬೀಸಿನಲ್ಲಿ ಜನಸಂಪರ್ಕ ಸಭೆ ನಡೆಸಿದರು.</p>.<p>‘ಕಳ್ಳತನ ಯತ್ನ ಪ್ರಕರಣ ಗಂಭಿರವಾಗಿ ಪರಿಗಣಿಸಲಾಗಿದೆ. ತಪ್ಪಿತಸ್ಥರನ್ನು ಶೀಘ್ರ ಬಂಧಿಸಲಾಗುವದು. ರೈತರು ಆತಂಕಕ್ಕೆ ಒಳಗಾಗಬಾರದು’ ಎಂದು ಎಸ್ಐ ಡಿ.ಎಸ್.ಈರಯ್ಯ ಹೇಳಿದರು.</p>.<p>‘ಗ್ರಾಮಗಳಿಗೆ ಭೇಟಿ ನೀಡುವ ಅಪರಿಚಿತರು, ಸಂಶಯಾಸ್ಪದ ವ್ಯಕ್ತಿಗಳ ಬಗ್ಗೆ ನಿಗಾ ಇಡಬೇಕು. ಸಂಶಯಗಳಿದ್ದರೆ ತಕ್ಷಣವೆ ಪೊಲೀಸರಿಗೆ ಮಾಹಿತಿ ನೀಡಿ’ ಎಂದು ಸೂಚಿಸಿದರು.</p>.<p>ಗ್ರಾಮೀಣ ಭಾಗದಲ್ಲಿ ರಾತ್ರಿ ವೇಳೆ ಪೊಲೀಸ್ ಸಿಬ್ಬಂದಿ ನಿರಂತರ ಗಸ್ತು ತಿರುಗುವಂತಾಗಬೇಕು. ಒಬ್ಬ ಸಿಬ್ಬಂದಿ ಬದಲು ಹೆಚ್ಚು ಜನರನ್ನು ನೇಮಿಸಿ ಎಂದು ರೈತರು ಒತ್ತಾಯಿಸಿದರು.</p>.<p>ನೆಗ್ಗು ಗ್ರಾಮ ಪಂಚಾಯ್ತಿ ಸದಸ್ಯ ಚಂದ್ರಕಾಂತ ಹೆಗಡೆ ನೇರ್ಲದ್ದ, ಉಮಾಪತಿ ಭಟ್ ಮತ್ತಿಗಾರ, ಗುರುಪಾದ ಹೆಗಡೆ ಬೊಮ್ನಳ್ಳಿ, ರವಿ ಹೆಗಡೆ ಹೊಸ್ಮನೆ, ಶ್ರೀಧರ ಹೆಗಡೆ ಇಳ್ಳುಮನೆ, ಶ್ರಿಪತಿ ಹೆಗಡೆ ನೇರ್ಲದ್ದ, ಪೊಲೀಸ್ ಸಿಬ್ಬಂದಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>