ಪಿ.ಎಸ್.ಐ ಸಂತೋಷಕುಮಾರ್.ಎಂ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು, ನಿಲುಗಡೆ ನಿಷೇಧ ಪ್ರದೇಶದಲ್ಲಿ ನಿಲ್ಲಿಸಲಾಗಿದ್ದ ವಾಹನಗಳ ಚಾಲಕರ ವಿರುದ್ಧ ಕ್ರಮ ಕೈಗೊಂಡರು.ರಥಬೀದಿ ಹಾಗೂಏಕಮುಖರಸ್ತೆಯಲ್ಲಿ ವಾಹನ ನಿಲ್ಲಿಸುವುದನ್ನು ಈಗಾಗಲೇ ನಿಷೇಧಿಸಲಾಗಿದೆ.ಕೆಲವು ಕಡೆ ಫಲಕಗಳನ್ನೂ ಅಳವಡಿಸಲಾಗಿದೆ.ಈ ಬಗ್ಗೆ ಜನರಿಗೆ ಸಾಕಷ್ಟು ತಿಳಿವಳಿಕೆಯನ್ನೂ ನೀಡಲಾಗಿದೆ. ಆದರೂ ವಾಹನ ಸವಾರರು ನಿಯಮ ಮೀರುತ್ತಿರುವುದರಿಂದ ಹಲವು ಬಾರಿಸಮಸ್ಯೆಯಾಗಿತ್ತು.