ಅನರ್ಹತೆ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದ 15 ಜನರಲ್ಲಿ ಒಬ್ಬರಾಗಿರುವ ಅವರು, ಕೋರ್ಟ್ ತೀರ್ಪು ಬರುವ ತನಕ ಕಾಯುವುದಾಗಿ ಹೇಳಿಕೊಂಡಿದ್ದರು. ಅಲ್ಲದೇ, ಯಾವುದೇ ಪಕ್ಷದಲ್ಲೂ ಗುರುತಿಸಿಕೊಳ್ಳದೇ ತಟಸ್ಥರಾಗಿದ್ದರು. ‘ನಾನು ಬಿಜೆಪಿ ಸೇರಿಲ್ಲ, ಕೋರ್ಟ್ ತೀರ್ಪು ಬಂದ ಮೇಲೆ ಎಲ್ಲ 15 ಜನರು ಒಟ್ಟಾಗಿ ಸಾಮೂಹಿಕ ನಿರ್ಧಾರ ಕೈಗೊಳ್ಳುತ್ತೇವೆ’ ಎಂದು ಕೂಡ ಹೇಳುತ್ತಿದ್ದರು. ಆದರೆ, ಕಳೆದ ಒಂದೆರಡು ದಿನಗಳಿಂದ ಕ್ಷೇತ್ರದಲ್ಲಿ ಬೆಂಬಲಿಗರ ಸಭೆ ನಡೆಸುತ್ತಿರುವ ಅವರು, ರಾಜ್ಯದ ಬಿಜೆಪಿ ಸರ್ಕಾರದ ಪರ ಮಾತನಾಡುತ್ತಿದ್ದಾರೆ.