<p><strong>ಕಾರವಾರ:</strong> ಅಂಕೋಲಾ ತಾಲ್ಲೂಕಿನ ಹಿಲ್ಲೂರಿನಿಂದ ಸಾಗಿ ಮಾದನಗೇರಿ ಕ್ರಾಸ್ನಲ್ಲಿ ರಾಷ್ಟ್ರೀಯ ಹೆದ್ದಾರಿ ಸಂಪರ್ಕಿಸುವ ರಸ್ತೆಯು ಅಲ್ಲಲ್ಲಿ ಪೂರ್ಣ ಪ್ರಮಾಣದಲ್ಲಿ ಹದಗೆಟ್ಟಿದೆ. ರಸ್ತೆಯ ಮಧ್ಯೆ ದೊಡ್ಡ ಹೊಂಡಗಳಾಗಿದ್ದು, ವಾಹನ ಸವಾರರು ಕಷ್ಟಪಟ್ಟು ಸಾಗುವಂತಾಗಿದೆ.</p>.<p>ಯಲ್ಲಾಪುರದಿಂದ ಕುಮಟಾ ಕಡೆಗೆ ಸಾಗುವವರಿಗೆ ಈ ರಸ್ತೆಯು ಸಮೀಪವಾಗುತ್ತದೆ. ಅಂಕೋಲಾ ಮೂಲಕ ಬರುವ ಬದಲು ಈ ರಸ್ತೆಯಲ್ಲಿ ಪ್ರಯಾಣಿಸಿದರೆ ಕೇವಲ 15 ಕಿಲೋಮೀಟರ್ ದೂರದಲ್ಲಿ ಮಾದನಗೇರಿ ಕ್ರಾಸ್ ತಲುಪಬಹುದು. ರಾಷ್ಟ್ರೀಯ ಹೆದ್ದಾರಿ 63 ಮತ್ತು 66ರ ನಡುವೆ ಒಟ್ಟು 28 ಕಿಲೋಮೀಟರ್ ಉಳಿತಾಯವಾಗುತ್ತದೆ. ಆದರೆ, ದಾರಿಯು ಹತ್ತಿರವಾಗುತ್ತದೆ ಎಂದು ಈ ಮಾರ್ಗದಲ್ಲಿ ಪ್ರಯಾಣಿಸಿದವರು ಪಶ್ಚಾತ್ತಾಪ ಪಡುವಂಥ ಸ್ಥಿತಿಯಿದೆ ಎಂದು ಕಾರು ಚಾಲಕ ರಮೇಶ ದೂರುತ್ತಾರೆ.</p>.<p>‘ಇದು ಪ್ರತಿ ಮಳೆಗಾಲದಲ್ಲಿ ನಾವು ಎದುರಿಸುತ್ತಿರುವ ಸಮಸ್ಯೆಯಾಗಿದೆ. ಆಂದ್ಲೆ, ಮೊಗಟಾ, ಮಾರೊಳ್ಳಿ ಮುಂತಾದ ಕಡೆ ರಸ್ತೆ ಸಂಪೂರ್ಣ ಹಾಳಾಗಿದೆ. ಡಾಂಬರು ಕಿತ್ತು ಹೋಗಿದ್ದು, ಹೊಂಡಗಳು ನಿರ್ಮಾಣವಾಗಿವೆ’ ಎನ್ನುತ್ತಾರೆ ಮೊಗಟಾದ ವಿನಾಯಕ ನಾರಾಯಣ ನಾಯ್ಕ.</p>.<p>‘ಈ ರಸ್ತೆಯಲ್ಲಿ ವಾಹನಗಳ ಸಂಚಾರವೂ ಹೆಚ್ಚಿದೆ. ಆದರೆ, ಹದಗೆಟ್ಟಿರುವ ಕಾರಣ ವಾಹನ ಸವಾರರು ಬೇಸರಗೊಳ್ಳುತ್ತಾರೆ. ಅಲ್ಲಲ್ಲಿ ರಸ್ತೆಯ ಮಧ್ಯೆಯೇ ನೀರು ಹರಿಯುತ್ತದೆ. ದುರಸ್ತಿ ಮಾಡಿಕೊಡುವಂತೆ ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ಮನವಿ ಮಾಡಿದ್ದೆವು. ಅನುದಾನ ಮಂಜೂರಾಗಿದೆ ಎಂದು ಹೇಳುತ್ತಾರೆಯೇ ವಿನಃ ರಸ್ತೆ ಪರಿಸ್ಥಿತಿ ಸುಧಾರಿಸಿಲ್ಲ’ ಎನ್ನುವುದು ಅವರ ದೂರು.</p>.<p>ಕುಮಟಾ– ಶಿರಸಿ ನಡುವಿನ ರಸ್ತೆಯನ್ನು ರಾಷ್ಟ್ರೀಯ ಹೆದ್ದಾರಿಯನ್ನಾಗಿ ಮೇಲ್ದರ್ಜೆಗೇರಿಸುವ ಕಾಮಗಾರಿ ಆರಂಭವಾದರೆ, ಹಿಲ್ಲೂರು ರಸ್ತೆಯಲ್ಲಿ ವಾಹನಗಳ ಸಂಚಾರ ಮತ್ತಷ್ಟು ಹೆಚ್ಚಾಗಲಿದೆ. ಶಿರಸಿಯಿಂದ ಯಾಣ, ವಡ್ಡಿ ಮೂಲಕ ಬಂದು ಹಿಲ್ಲೂರಿನಿಂದ ಅಂಕೋಲಾ ಅಥವಾ ಕುಮಟಾದತ್ತ ಪ್ರಯಾಣಿಸುವವರೂ ಈ ರಸ್ತೆಯನ್ನು ಬಳಸಬಹುದು. ಹೆದ್ದಾರಿ ಕಾಮಗಾರಿ ಆರಂಭವಾಗುವ ಮೊದಲು ಈ ರಸ್ತೆಯನ್ನು ದುರಸ್ತಿಗೊಳಿಸಬೇಕು. ಇಲ್ಲದಿದ್ದರೆ ಸಮಸ್ಯೆ ಉಲ್ಬಣಿಸಲಿದೆ ಎನ್ನುವುದು ಸ್ಥಳೀಯರ ಒತ್ತಾಯವಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾರವಾರ:</strong> ಅಂಕೋಲಾ ತಾಲ್ಲೂಕಿನ ಹಿಲ್ಲೂರಿನಿಂದ ಸಾಗಿ ಮಾದನಗೇರಿ ಕ್ರಾಸ್ನಲ್ಲಿ ರಾಷ್ಟ್ರೀಯ ಹೆದ್ದಾರಿ ಸಂಪರ್ಕಿಸುವ ರಸ್ತೆಯು ಅಲ್ಲಲ್ಲಿ ಪೂರ್ಣ ಪ್ರಮಾಣದಲ್ಲಿ ಹದಗೆಟ್ಟಿದೆ. ರಸ್ತೆಯ ಮಧ್ಯೆ ದೊಡ್ಡ ಹೊಂಡಗಳಾಗಿದ್ದು, ವಾಹನ ಸವಾರರು ಕಷ್ಟಪಟ್ಟು ಸಾಗುವಂತಾಗಿದೆ.</p>.<p>ಯಲ್ಲಾಪುರದಿಂದ ಕುಮಟಾ ಕಡೆಗೆ ಸಾಗುವವರಿಗೆ ಈ ರಸ್ತೆಯು ಸಮೀಪವಾಗುತ್ತದೆ. ಅಂಕೋಲಾ ಮೂಲಕ ಬರುವ ಬದಲು ಈ ರಸ್ತೆಯಲ್ಲಿ ಪ್ರಯಾಣಿಸಿದರೆ ಕೇವಲ 15 ಕಿಲೋಮೀಟರ್ ದೂರದಲ್ಲಿ ಮಾದನಗೇರಿ ಕ್ರಾಸ್ ತಲುಪಬಹುದು. ರಾಷ್ಟ್ರೀಯ ಹೆದ್ದಾರಿ 63 ಮತ್ತು 66ರ ನಡುವೆ ಒಟ್ಟು 28 ಕಿಲೋಮೀಟರ್ ಉಳಿತಾಯವಾಗುತ್ತದೆ. ಆದರೆ, ದಾರಿಯು ಹತ್ತಿರವಾಗುತ್ತದೆ ಎಂದು ಈ ಮಾರ್ಗದಲ್ಲಿ ಪ್ರಯಾಣಿಸಿದವರು ಪಶ್ಚಾತ್ತಾಪ ಪಡುವಂಥ ಸ್ಥಿತಿಯಿದೆ ಎಂದು ಕಾರು ಚಾಲಕ ರಮೇಶ ದೂರುತ್ತಾರೆ.</p>.<p>‘ಇದು ಪ್ರತಿ ಮಳೆಗಾಲದಲ್ಲಿ ನಾವು ಎದುರಿಸುತ್ತಿರುವ ಸಮಸ್ಯೆಯಾಗಿದೆ. ಆಂದ್ಲೆ, ಮೊಗಟಾ, ಮಾರೊಳ್ಳಿ ಮುಂತಾದ ಕಡೆ ರಸ್ತೆ ಸಂಪೂರ್ಣ ಹಾಳಾಗಿದೆ. ಡಾಂಬರು ಕಿತ್ತು ಹೋಗಿದ್ದು, ಹೊಂಡಗಳು ನಿರ್ಮಾಣವಾಗಿವೆ’ ಎನ್ನುತ್ತಾರೆ ಮೊಗಟಾದ ವಿನಾಯಕ ನಾರಾಯಣ ನಾಯ್ಕ.</p>.<p>‘ಈ ರಸ್ತೆಯಲ್ಲಿ ವಾಹನಗಳ ಸಂಚಾರವೂ ಹೆಚ್ಚಿದೆ. ಆದರೆ, ಹದಗೆಟ್ಟಿರುವ ಕಾರಣ ವಾಹನ ಸವಾರರು ಬೇಸರಗೊಳ್ಳುತ್ತಾರೆ. ಅಲ್ಲಲ್ಲಿ ರಸ್ತೆಯ ಮಧ್ಯೆಯೇ ನೀರು ಹರಿಯುತ್ತದೆ. ದುರಸ್ತಿ ಮಾಡಿಕೊಡುವಂತೆ ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ಮನವಿ ಮಾಡಿದ್ದೆವು. ಅನುದಾನ ಮಂಜೂರಾಗಿದೆ ಎಂದು ಹೇಳುತ್ತಾರೆಯೇ ವಿನಃ ರಸ್ತೆ ಪರಿಸ್ಥಿತಿ ಸುಧಾರಿಸಿಲ್ಲ’ ಎನ್ನುವುದು ಅವರ ದೂರು.</p>.<p>ಕುಮಟಾ– ಶಿರಸಿ ನಡುವಿನ ರಸ್ತೆಯನ್ನು ರಾಷ್ಟ್ರೀಯ ಹೆದ್ದಾರಿಯನ್ನಾಗಿ ಮೇಲ್ದರ್ಜೆಗೇರಿಸುವ ಕಾಮಗಾರಿ ಆರಂಭವಾದರೆ, ಹಿಲ್ಲೂರು ರಸ್ತೆಯಲ್ಲಿ ವಾಹನಗಳ ಸಂಚಾರ ಮತ್ತಷ್ಟು ಹೆಚ್ಚಾಗಲಿದೆ. ಶಿರಸಿಯಿಂದ ಯಾಣ, ವಡ್ಡಿ ಮೂಲಕ ಬಂದು ಹಿಲ್ಲೂರಿನಿಂದ ಅಂಕೋಲಾ ಅಥವಾ ಕುಮಟಾದತ್ತ ಪ್ರಯಾಣಿಸುವವರೂ ಈ ರಸ್ತೆಯನ್ನು ಬಳಸಬಹುದು. ಹೆದ್ದಾರಿ ಕಾಮಗಾರಿ ಆರಂಭವಾಗುವ ಮೊದಲು ಈ ರಸ್ತೆಯನ್ನು ದುರಸ್ತಿಗೊಳಿಸಬೇಕು. ಇಲ್ಲದಿದ್ದರೆ ಸಮಸ್ಯೆ ಉಲ್ಬಣಿಸಲಿದೆ ಎನ್ನುವುದು ಸ್ಥಳೀಯರ ಒತ್ತಾಯವಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>