ಪ್ರಾಮಾಣಿಕ ಹಾಗೂ ಪರಿಶ್ರಮದಿಂದ ಕೆಲಸ ಮಾಡಿದ ಪೌರ ಕಾರ್ಮಿಕರಾದ ದಯಾನಂದ ಹರಿಜನ, ಅನಿಲ್ ಹರಿಜನ, ಶಿವಾನಂದ ಚನ್ನಯ್ಯ, ಸುಶೀಲಾ ಹರಿಜನ ಅವರನ್ನು ಸನ್ಮಾನಿಸಲಾಯಿತು. ಶೈಕ್ಷಣಿಕವಾಗಿ ಸಾಧನೆ ಮಾಡಿದ ಪೌರ ಕಾರ್ಮಿಕರ ಮಕ್ಕಳನ್ನು ಪುರಸ್ಕರಿಸಲಾಯಿತು. ವಿಶೇಷ ಭತ್ಯೆಯನ್ನು ವಿತರಿಸಲಾಯಿತು. ಪೌರಾಡಳಿತ ನಿರ್ದೇಶನಾಲಯದ ಸಾಧನಾ ಪ್ರಶಸ್ತಿ ಪಡೆದಿರುವ ಆರೋಗ್ಯ ನಿರೀಕ್ಷಕ ಆರ್.ಎಂ.ವೆರ್ಣೇಕರ್ ಅವರನ್ನು ಸನ್ಮಾನಿಸಲಾಯಿತು.