ಸಿದ್ದಾಪುರ: ಶಾಶ್ವತ ಪುನರ್ವಸತಿಗೆ ಆಗ್ರಹಿಸಿ, ಸಂತ್ರಸ್ತರು ಸಿದ್ದಾಪುರದಲ್ಲಿ ನಡೆಸುತ್ತಿರುವ ಪ್ರತಿಭಟನೆ ಮಂಗಳವಾರಕ್ಕೆ 2ನೇ ದಿನಕ್ಕೆ ಕಾಲಿಟ್ಟಿದ್ದು, ಅಧಿಕಾರಿಗಳಿಂದ ಪ್ರತಿಭಟನೆ ಹತ್ತಿಕ್ಕುವ ಪ್ರಯತ್ನವೂ ನಡೆಯುತ್ತಿದೆ ಎಂಬ ಆರೋಪ ಕೇಳಿಬಂದಿದೆ.
ಅದರ ಭಾಗವಾಗ ಮಂಗಳವಾರ ರಾತ್ರಿ ಪ್ರತಿಭಟನಾ ಸ್ಥಳದಲ್ಲಿ ಗ್ರಾಮ ಪಂಚಾಯಿತಿ ಆಡಳಿತವು ವಿದ್ಯುತ್ ಸಂಪರ್ಕ ಕಡಿತಗೊಳಿಸಿದೆ. ಅದಕ್ಕೂ ಜಗ್ಗದ ಪ್ರತಿಭಟನಕಾರರು ಕ್ಯಾಂಡಲ್ ಬೆಳಕಿನಲ್ಲಿ ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.