ರಾಜ್ಯದಲ್ಲೆಡೆ ಮಳೆ ಉತ್ತಮವಾಗುತ್ತಿದ್ದು ಕೃಷಿ ಚಟುವಟಿಕೆ ಹೆಚ್ಚಿದೆ. ಅಧಿಕಾರಿಗಳು ರೈತ ಸ್ನೇಹಿಯಾಗಬೇಕು. ಕೃಷಿ ವಿಜ್ಞಾನಿಗಳು ಅಧಿಕಾರಿಗಳು ಸಮನ್ವಯತೆಯೊಂದಿಗೆ ರೈತರಿಗೆ ನೆರವಾಗಬೇಕು. ಉದ್ಯೋಗಕ್ಕೆ ಯುವಕರು ಕೆಲಸಕ್ಕೆ ಹೋದವರು ಹಳ್ಳಿಗೆ ಮರಳಿದ್ದಾರೆ. ಅವರೆಲ್ಲ ಕೃಷಿಯಲ್ಲಿ ತೊಡಗಿಸಿಕೊಂಡಿದ್ದಾರೆ. ಹಳ್ಳಿಯ ವೃದ್ಧಾಶ್ರಮ ವಾತಾವರಣ ಮರೆಯಾಗಿ, ಕೃಷಿ ಚಟುವಟಿಕೆಯ ವಾತಾವರಣ ಅಧಿಕವಾಗಿದೆ. ಯುವಕರು ಆಧುನಿಕ ಕೃಷಿ ಚಟುವಟಿಕೆಯತ್ತ ಹೊರಳುತ್ತಿದ್ದಾರೆ. ಅವರಿಗೆ ಕೃಷಿ ಚಟುವಟಿಕೆಯಲ್ಲಿ ಸ್ಥಿರವಾಗಲು ಇಲಾಖೆ ಮುಂದಾಗಬೇಕಿದೆ ಎಂದು ಹೇಳಿದರು.
ವಿಧಾನ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ಕೃಷಿ ವಿಜ್ಞಾನ ಕೇಂದ್ರ ರೈತರಿಂದ ದೂರವಾಗಿಲ್ಲ. ರೈತರ ಕೃಷಿಗೆ ಆಧುನಿಕತೆಯ ಸ್ಪರ್ಶ ನೀಡಲು ನೆರವಾಗುತ್ತಿದೆ. ಯುವ ಪೀಳಿಗೆಗೆ ಕೃಷಿ ಚಟುವಟಿಕೆಗೆ ವೈಜ್ಞಾನಿಕತೆ ರೂಢಿಸಿಕೊಳ್ಳುವಂತೆ ಮಾಡಬೇಕು, ಅದರ ಜವಾಬ್ದಾರಿ ಕೃಷಿ ವಿಜ್ಞಾನ ಕೇಂದ್ರದ್ದು ಎಂದರು. ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ್ ಮಾತನಾಡಿ ಕೃಷಿಕರೇ ದೇಶ ಬದುಕಿಸುವವರು ಎಂದರು. ವಿಧಾನ ಪರಿಷತ್ ಸದಸ್ಯ ಶಾಂತಾರಾಮ ಸಿದ್ದಿ, ಕೃಷಿ ವಿಶ್ವ ವಿದ್ಯಾಲಯದ ಕುಲಪತಿಡಾ.ಮಹಾದೇವ ಚೆಟ್ಟಿ ಮತ್ತಿತರರು ಪಾಲ್ಗೊಂಡಿದ್ದರು.