ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಪಾಯಕಾರಿ ಸ್ಥಳದಲ್ಲಿ ಬ್ಯಾರಿಕೇಡ್ ಅಳವಡಿಕೆ

Last Updated 17 ಜುಲೈ 2022, 13:03 IST
ಅಕ್ಷರ ಗಾತ್ರ

ಶಿರಸಿ: ಅಪಾಯಕಾರಿಯಾಗಿ ಪರಿಣಮಿಸಿರುವ ಶಿರಸಿ–ಕುಮಟಾ ರಾಷ್ಟ್ರೀಯ ಹೆದ್ದಾರಿಯ ಹಾರೂಗಾರ ತಿರುವಿನ ಬಳಿ ಭಾನುವಾರ ವಾಹನಗಳ ವೇಗ ನಿಯಂತ್ರಣಕ್ಕೆ ಬ್ಯಾರಿಕೇಡ್ ಅಳವಡಿಸಲಾಗಿದೆ.

ಗೋಳಿ ಕ್ರಾಸ್‍ನಿಂದ ಹಾರೂಗಾರ ತಿರುವಿನ ಬಳಿಯವರೆಗೆ ಇರುವ ಇಳಿಜಾರಿನ ಪ್ರದೇಶದಲ್ಲಿ ನಾಲ್ಕು ಕಡೆಗಳಲ್ಲಿ ಬ್ಯಾರಿಕೇಡ್ ಅಳವಡಿಕೆಯಾಗಿದೆ. ಹೆದ್ದಾರಿ ಕಾಮಗಾರಿ ನಡೆಸುತ್ತಿರುವ ಆರ್.ಎನ್.ಎಸ್.ಇನ್‍ಫ್ರಾಸ್ಟ್ರಕ್ಚರ್ ಸಂಸ್ಥೆ ಇವುಗಳನ್ನು ಅಳವಡಿಸಿದೆ.

‘ಅಪಾಯಕಾರಿಯಾದ ಹೆದ್ದಾರಿ ತಿರುವು’ ಶೀರ್ಷಿಕೆ ಅಡಿ ‘ಪ್ರಜಾವಾಣಿ’ ಜು.17 ರಂದು ವರದಿ ಪ್ರಕಟಿಸಿತ್ತು. ಇಳಿಜಾರಿನ ತಿರುವಿನಲ್ಲಿ ವಾಹನಗಳು ಪಲ್ಟಿಯಾಗುತ್ತಿರುವ ಸಮಸ್ಯೆಯ ಕುರಿತು ವಿವರಿಸಲಾಗಿತ್ತು.

‘ವಾಹನಗಳ ವೇಗ ನಿಯಂತ್ರಿಸಿದರೆ ಅಪಘಾತ ಪ್ರಮಾಣವನ್ನೂ ತಕ್ಕಮಟ್ಟಿಗೆ ನಿಯಂತ್ರಿಸಲು ಸಾಧ್ಯವಿದೆ. ಮಳೆ ಇಳಿಕೆಯಾದ ನಂತರ ತಿರುವಿನಲ್ಲಿ ಬಾಕಿ ಇರುವ ಕಾಂಕ್ರೀಟ್ ರಸ್ತೆ ಕಾಮಗಾರಿ ಪೂರ್ಣಗೊಳಿಸುತ್ತೇವೆ’ ಎಂದು ಆರ್.ಎನ್.ಎಸ್.ಇನ್‍ಫ್ರಾಸ್ಟ್ರಕ್ಚರ್ ಸಂಸ್ಥೆಯ ಹೈವೆ ಎಂಜಿನಿಯರ್ ಗೋವಿಂದ ಭಟ್ಟ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT