ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘1983ರ ಜಿಲ್ಲಾ ಪರಿಷತ್ತು ಕಾಯ್ದೆ ಅತ್ಯುತ್ತಮವಾಗಿತ್ತು. ಅದನ್ನು ಸಂಪೂರ್ಣವಾಗಿ ನಾಶಗೊಳಿಸಿದರು. 1993ರಲ್ಲಿ ಕಾಂಗ್ರೆಸ್ ಸರ್ಕಾರವು ಬೇರೊಂದು ಕಾಯ್ದೆ ಜಾರಿ ಮಾಡಿ ಸ್ಥಳೀಯ ಆಡಳಿತದ ಅಧಿಕಾರವನ್ನು ಸರ್ಕಾರಿ ನೌಕರರ ಕೈಯಲ್ಲಿರಿಸಿ ವ್ಯವಸ್ಥೆಯನ್ನು ದುರ್ಬಲಗೊಳಿಸಿತು. ಆಗ ವೀರಪ್ಪ ಮೊಯ್ಲಿ ಮುಖ್ಯಮಂತ್ರಿಯಾಗಿ ಹಾಗೂ ಎಂ.ವೈ. ಘೋರ್ಪಡೆ ಗ್ರಾಮೀಣಾಭಿವೃದ್ಧಿ ಸಚಿವರಾಗಿದ್ದರು’ ಎಂದು ದೂರಿದರು.