ಯಲ್ಲಾಪುರದಲ್ಲಿ ಮಂಗಳವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಬಿ.ಜೆ.ಪಿ ಸರ್ಕಾರ ರಚನೆಯಾಗಲು ಆನಂದ ಸಿಂಗ್, ರಮೇಶ್ ಜಾರಕಿಹೊಳಿ ಅವರಂತಹ 16 ಮಂದಿ ಶಾಸಕರ ತ್ಯಾಗ ಕಾರಣ. ಈಚೆಗೆ ಮುಖ್ಯಮಂತ್ರಿ ಬದಲಾಗಿ ಹೊಸ ಸಂಪುಟ ರಚನೆಯಾದಾಗ ಪಕ್ಷದ ಹೈಕಮಾಂಡ್ ಸರಿಯಾಗಿ ನಡೆಸಿಕೊಳ್ಳಬೇಕಿತ್ತು. ಆದರೆ, ಹಾಗಾಗಿಲ್ಲ ಎಂಬ ಭಾವನೆ ನಮ್ಮದಾಗಿದೆ’ ಎಂದು ಹೇಳಿದರು.