<p><strong>ಕಾರವಾರ</strong>: ‘ನಗರದಲ್ಲಿ ಹೆಂಜಾ ನಾಯ್ಕ ಹೆಸರಿನಲ್ಲಿ ಸೇನಾ ಪೂರ್ವ ತರಬೇತಿ ಶಾಲೆ ಸ್ಥಾಪಿಸಲು ಹಣಕಾಸು ಬಿಡುಗಡೆ ಮಾಡಲಾಗಿದೆ. ಇನ್ನೊಂದು ತಿಂಗಳಲ್ಲಿ ಮುಖ್ಯಮಂತ್ರಿಯಿಂದ ಉದ್ಘಾಟನೆ ಮಾಡಿಸಲಾಗುತ್ತದೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.</p>.<p>ನಗರದಲ್ಲಿ ಶನಿವಾರ ಹಮ್ಮಿಕೊಳ್ಳಲಾದ ‘ಅಮೃತ ಭಾರತಿಗೆ ಕನ್ನಡದಾರತಿ’ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಸೇನಾ ಪೂರ್ವ ತರಬೇತಿ ಶಾಲೆಯ ಸ್ವರೂಪಗಳನ್ನು ನಿರ್ಧರಿಸಲಾಗಿದೆ. ಸ್ಥಳದ ಬಗ್ಗೆ ಶೀಘ್ರವೇ ತೀರ್ಮಾನ ಕೈಗೊಳ್ಳಲಾಗುತ್ತದೆ’ ಎಂದು ಹೇಳಿದರು.</p>.<p>‘ದೇಶದ ಸ್ವಾತಂತ್ರ್ಯಕ್ಕಾಗಿ ಪ್ರಾಣ ತ್ಯಾಗ ಮಾಡಿದವರು, ಮನೆ ಮಠ ಕಳೆದುಕೊಂಡವರ ಬಗ್ಗೆ ಇಂದಿನ ಮಕ್ಕಳಿಗೆ ತಿಳಿಸುವ ಅಗತ್ಯವಿದೆ. 75 ವರ್ಷಗಳ ಹಿಂದೆ ನಡೆದ ಘಟನೆಗಳನ್ನು ಸ್ಮರಿಸಬೇಕು. ಈ ಕಾರ್ಯಕ್ರಮವು ಅಂಥ ಸಂದರ್ಭಗಳನ್ನು ಸ್ಮರಿಸಲು ಒಂದು ಅವಕಾಶವಾಗಿದೆ’ ಎಂದರು.</p>.<p>‘ಭಾರತ ಬದಲಾಗಿದೆ. ಇದರ ಬಗ್ಗೆ ಯಾರಿಗೂ ಆತಂಕದ ಅವಶ್ಯಕತೆಯಿಲ್ಲ. ಸಮರ್ಥ, ಸ್ವಾಭಿಮಾನಿ, ಶಕ್ತಿಶಾಲಿ ಭಾರತ ನಿರ್ಮಾಣವು ಸಂವಿಧಾನದ ಆಶಯವಾಗಿದೆ. ಇಡೀ ವಿಶ್ವದ ಗಮನ ಈಗ ನಮ್ಮ ದೇಶದ ಮೇಲಿದೆ’ ಎಂದು ಹೇಳಿದರು.</p>.<p>‘ದೇಶಕ್ಕೆ ಸಂಕಷ್ಟದ ಸಂದರ್ಭದಲ್ಲಿ ಪ್ರತಿ ಮನೆಯಿಂದ ಯೋಧನೊಬ್ಬ ಬರಬೇಕು ಎಂಬ ಇದೇ ಉದ್ದೇಶದಿಂದ ಅಗ್ನಿಪಥ ಯೋಜನೆಯನ್ನು ಕೇಂದ್ರ ಸರ್ಕಾರ ಪ್ರಕಟಿಸಿದೆ. ಆದರೆ, ಅದನ್ನು ವಿರೋಧಿಸಿ, ಬಡವರು ಸಂಚರಿಸುವ ರೈಲಿಗೆ ಬೆಂಕಿ ಹಚ್ಚಿದವರಿಗೆ ಸಿಕ್ಕಿದ ಲಾಭವೇನು’ ಎಂದು ಪ್ರಶ್ನಿಸಿದರು.</p>.<p>ಅಧ್ಯಕ್ಷತೆ ವಹಿಸಿದ್ದ ಶಾಸಕಿ ರೂಪಾಲಿ ನಾಯ್ಕ ಮಾತನಾಡಿ, ‘ಅನೇಕರು ತ್ಯಾಗ ಬಲಿದಾನ ಮಾಡಿ ದೊರಕಿದ ಈ ಸ್ವತಂತ್ರ ದೇಶಕ್ಕೆ ನಾವೇನು ಕೊಡುಗೆ ನೀಡಬೇಕು ಎಂಬುದನ್ನು ಅರಿತುಕೊಳ್ಳಬೇಕು. ದೇಶಕ್ಕಾಗಿ ನಮ್ಮ ಯಾವುದೇ ಸೇವೆಗಳು ಕಾಲ್ಪನಿಕವಾಗಿ ಇರಬಾರದು’ ಎಂದು ಹೇಳಿದರು.</p>.<p>ಸ್ವಾತಂತ್ರ್ಯ ಹೋರಾಟಗಾರರ ಮನೆತನದವರಾದಬೊಮ್ಮಯ್ಯ ವೆಂಕಣ್ಣ ನಾಯಕ ಹಾಗೂ ಪ್ರಕಾಶ ನಾರಾಯಣ ನಾಯ್ಕ ಅವರನ್ನು ಸನ್ಮಾನಿಸಲಾಯಿತು. ಹರ್ಷನಾರಾಯಣ ಬೆಂಗಳೂರು ಉಪನ್ಯಾಸ ನೀಡಿದರು. ದಿನಕರ ಕಲಾ ನಿಕೇತನದ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಪ್ರಾರ್ಥಿಸಿದರು. ಉಪ ವಿಭಾಗಾಧಿಕಾರಿ ಜಯಲಕ್ಷ್ಮಿ ರಾಯಕೋಡ ಸ್ವಾಗತಿಸಿದರು.</p>.<p>ನಗರಸಭೆ ಅಧ್ಯಕ್ಷ ಡಾ.ನಿತಿನ್ ಪಿಕಳೆ, ಉಪಾಧ್ಯಕ್ಷ ಪ್ರಕಾಶ ಪಿ.ನಾಯ್ಕ, ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪ್ರಿಯಾಂಗಾ.ಎಂ, ಮಾಜಿ ಶಾಸಕ ಗಂಗಾಧರ ಭಟ್ ವೇದಿಕೆಯಲ್ಲಿದ್ದರು.</p>.<p><strong>ಕಡಲ್ಕೊರೆತ ತಡೆ: ಸಭೆ 27ಕ್ಕೆ</strong><br />‘ರಾಜ್ಯದ ಕರಾವಳಿಯಲ್ಲಿ ಕಡಲ್ಕೊರೆತ ತಡೆಯಲು ಹೊಸ ತಂತ್ರಜ್ಞಾನದ ಕಾಮಗಾರಿ ನಡೆಸಲು ಚಿಂತಿಸಲಾಗಿದೆ. ಈ ಬಗ್ಗೆ ಚರ್ಚಿಸಲು ಬಂದರು ಖಾತೆ ಸಚಿವ ಎಸ್.ಅಂಗಾರ ಅವರಿಗೆಜೂನ್ 27ಕ್ಕೆ ಕಾರವಾರಕ್ಕೆ ಭೇಟಿ ನೀಡುವಂತೆ ಕೇಳಿದ್ದೇನೆ’ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.</p>.<p>ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕಡಲ್ಕೊರೆತ ತಡೆಯಲು ಪ್ರತಿ ವರ್ಷ ಕೋಟ್ಯಂತರ ರೂಪಾಯಿಯನ್ನು ಸರ್ಕಾರ ವ್ಯಯಿಸುತ್ತಿದೆ. ನಬಾರ್ಡ್ ಮೂಲಕ ಉಳ್ಳಾಲದಿಂದ ಕಾರವಾರದ ತನಕ ₹ 900 ಕೋಟಿ ಮೊತ್ತದ ಕಾಮಗಾರಿ ಆರಂಭಿಸಲು ಉದ್ದೇಶಿಸಲಾಗಿತ್ತು. ಆದರೆ, ಅದು ಉಳ್ಳಾಲದಲ್ಲೇ ಸಮಸ್ಯೆಗೀಡಾಯಿತು. ಇದರ ಬಗ್ಗೆ ಜನರಿಂದಲೂ ಟೀಕೆ ವ್ಯಕ್ತವಾಗುತ್ತಿದೆ. ಹಾಗಾಗಿ ಹೊಸ ವಿನ್ಯಾಸದಲ್ಲಿ, ಶಾಶ್ವತ ಪರಿಹಾರದ ಕಾಮಗಾರಿ ಹಮ್ಮಿಕೊಳ್ಳಲು ಉದ್ದೇಶಿಸಲಾಗಿದೆ’ ಎಂದರು.</p>.<p>***</p>.<p>ಸಮುದ್ರದಲ್ಲಿ ಈಜಲು ಹೋಗಿ ಹಲವು ಪ್ರವಾಸಿಗರು ಸಾವಿಗೀಡಾಗುತ್ತಿದ್ದಾರೆ. ಇದನ್ನು ತಡೆಯಲು ಜಿಲ್ಲಾಧಿಕಾರಿ ಜೊತೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು.<br /><em><strong>- ಕೋಟ ಶ್ರೀನಿವಾಸ ಪೂಜಾರಿ, ಜಿಲ್ಲಾ ಉಸ್ತುವಾರಿ ಸಚಿವ</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾರವಾರ</strong>: ‘ನಗರದಲ್ಲಿ ಹೆಂಜಾ ನಾಯ್ಕ ಹೆಸರಿನಲ್ಲಿ ಸೇನಾ ಪೂರ್ವ ತರಬೇತಿ ಶಾಲೆ ಸ್ಥಾಪಿಸಲು ಹಣಕಾಸು ಬಿಡುಗಡೆ ಮಾಡಲಾಗಿದೆ. ಇನ್ನೊಂದು ತಿಂಗಳಲ್ಲಿ ಮುಖ್ಯಮಂತ್ರಿಯಿಂದ ಉದ್ಘಾಟನೆ ಮಾಡಿಸಲಾಗುತ್ತದೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.</p>.<p>ನಗರದಲ್ಲಿ ಶನಿವಾರ ಹಮ್ಮಿಕೊಳ್ಳಲಾದ ‘ಅಮೃತ ಭಾರತಿಗೆ ಕನ್ನಡದಾರತಿ’ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಸೇನಾ ಪೂರ್ವ ತರಬೇತಿ ಶಾಲೆಯ ಸ್ವರೂಪಗಳನ್ನು ನಿರ್ಧರಿಸಲಾಗಿದೆ. ಸ್ಥಳದ ಬಗ್ಗೆ ಶೀಘ್ರವೇ ತೀರ್ಮಾನ ಕೈಗೊಳ್ಳಲಾಗುತ್ತದೆ’ ಎಂದು ಹೇಳಿದರು.</p>.<p>‘ದೇಶದ ಸ್ವಾತಂತ್ರ್ಯಕ್ಕಾಗಿ ಪ್ರಾಣ ತ್ಯಾಗ ಮಾಡಿದವರು, ಮನೆ ಮಠ ಕಳೆದುಕೊಂಡವರ ಬಗ್ಗೆ ಇಂದಿನ ಮಕ್ಕಳಿಗೆ ತಿಳಿಸುವ ಅಗತ್ಯವಿದೆ. 75 ವರ್ಷಗಳ ಹಿಂದೆ ನಡೆದ ಘಟನೆಗಳನ್ನು ಸ್ಮರಿಸಬೇಕು. ಈ ಕಾರ್ಯಕ್ರಮವು ಅಂಥ ಸಂದರ್ಭಗಳನ್ನು ಸ್ಮರಿಸಲು ಒಂದು ಅವಕಾಶವಾಗಿದೆ’ ಎಂದರು.</p>.<p>‘ಭಾರತ ಬದಲಾಗಿದೆ. ಇದರ ಬಗ್ಗೆ ಯಾರಿಗೂ ಆತಂಕದ ಅವಶ್ಯಕತೆಯಿಲ್ಲ. ಸಮರ್ಥ, ಸ್ವಾಭಿಮಾನಿ, ಶಕ್ತಿಶಾಲಿ ಭಾರತ ನಿರ್ಮಾಣವು ಸಂವಿಧಾನದ ಆಶಯವಾಗಿದೆ. ಇಡೀ ವಿಶ್ವದ ಗಮನ ಈಗ ನಮ್ಮ ದೇಶದ ಮೇಲಿದೆ’ ಎಂದು ಹೇಳಿದರು.</p>.<p>‘ದೇಶಕ್ಕೆ ಸಂಕಷ್ಟದ ಸಂದರ್ಭದಲ್ಲಿ ಪ್ರತಿ ಮನೆಯಿಂದ ಯೋಧನೊಬ್ಬ ಬರಬೇಕು ಎಂಬ ಇದೇ ಉದ್ದೇಶದಿಂದ ಅಗ್ನಿಪಥ ಯೋಜನೆಯನ್ನು ಕೇಂದ್ರ ಸರ್ಕಾರ ಪ್ರಕಟಿಸಿದೆ. ಆದರೆ, ಅದನ್ನು ವಿರೋಧಿಸಿ, ಬಡವರು ಸಂಚರಿಸುವ ರೈಲಿಗೆ ಬೆಂಕಿ ಹಚ್ಚಿದವರಿಗೆ ಸಿಕ್ಕಿದ ಲಾಭವೇನು’ ಎಂದು ಪ್ರಶ್ನಿಸಿದರು.</p>.<p>ಅಧ್ಯಕ್ಷತೆ ವಹಿಸಿದ್ದ ಶಾಸಕಿ ರೂಪಾಲಿ ನಾಯ್ಕ ಮಾತನಾಡಿ, ‘ಅನೇಕರು ತ್ಯಾಗ ಬಲಿದಾನ ಮಾಡಿ ದೊರಕಿದ ಈ ಸ್ವತಂತ್ರ ದೇಶಕ್ಕೆ ನಾವೇನು ಕೊಡುಗೆ ನೀಡಬೇಕು ಎಂಬುದನ್ನು ಅರಿತುಕೊಳ್ಳಬೇಕು. ದೇಶಕ್ಕಾಗಿ ನಮ್ಮ ಯಾವುದೇ ಸೇವೆಗಳು ಕಾಲ್ಪನಿಕವಾಗಿ ಇರಬಾರದು’ ಎಂದು ಹೇಳಿದರು.</p>.<p>ಸ್ವಾತಂತ್ರ್ಯ ಹೋರಾಟಗಾರರ ಮನೆತನದವರಾದಬೊಮ್ಮಯ್ಯ ವೆಂಕಣ್ಣ ನಾಯಕ ಹಾಗೂ ಪ್ರಕಾಶ ನಾರಾಯಣ ನಾಯ್ಕ ಅವರನ್ನು ಸನ್ಮಾನಿಸಲಾಯಿತು. ಹರ್ಷನಾರಾಯಣ ಬೆಂಗಳೂರು ಉಪನ್ಯಾಸ ನೀಡಿದರು. ದಿನಕರ ಕಲಾ ನಿಕೇತನದ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಪ್ರಾರ್ಥಿಸಿದರು. ಉಪ ವಿಭಾಗಾಧಿಕಾರಿ ಜಯಲಕ್ಷ್ಮಿ ರಾಯಕೋಡ ಸ್ವಾಗತಿಸಿದರು.</p>.<p>ನಗರಸಭೆ ಅಧ್ಯಕ್ಷ ಡಾ.ನಿತಿನ್ ಪಿಕಳೆ, ಉಪಾಧ್ಯಕ್ಷ ಪ್ರಕಾಶ ಪಿ.ನಾಯ್ಕ, ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪ್ರಿಯಾಂಗಾ.ಎಂ, ಮಾಜಿ ಶಾಸಕ ಗಂಗಾಧರ ಭಟ್ ವೇದಿಕೆಯಲ್ಲಿದ್ದರು.</p>.<p><strong>ಕಡಲ್ಕೊರೆತ ತಡೆ: ಸಭೆ 27ಕ್ಕೆ</strong><br />‘ರಾಜ್ಯದ ಕರಾವಳಿಯಲ್ಲಿ ಕಡಲ್ಕೊರೆತ ತಡೆಯಲು ಹೊಸ ತಂತ್ರಜ್ಞಾನದ ಕಾಮಗಾರಿ ನಡೆಸಲು ಚಿಂತಿಸಲಾಗಿದೆ. ಈ ಬಗ್ಗೆ ಚರ್ಚಿಸಲು ಬಂದರು ಖಾತೆ ಸಚಿವ ಎಸ್.ಅಂಗಾರ ಅವರಿಗೆಜೂನ್ 27ಕ್ಕೆ ಕಾರವಾರಕ್ಕೆ ಭೇಟಿ ನೀಡುವಂತೆ ಕೇಳಿದ್ದೇನೆ’ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.</p>.<p>ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕಡಲ್ಕೊರೆತ ತಡೆಯಲು ಪ್ರತಿ ವರ್ಷ ಕೋಟ್ಯಂತರ ರೂಪಾಯಿಯನ್ನು ಸರ್ಕಾರ ವ್ಯಯಿಸುತ್ತಿದೆ. ನಬಾರ್ಡ್ ಮೂಲಕ ಉಳ್ಳಾಲದಿಂದ ಕಾರವಾರದ ತನಕ ₹ 900 ಕೋಟಿ ಮೊತ್ತದ ಕಾಮಗಾರಿ ಆರಂಭಿಸಲು ಉದ್ದೇಶಿಸಲಾಗಿತ್ತು. ಆದರೆ, ಅದು ಉಳ್ಳಾಲದಲ್ಲೇ ಸಮಸ್ಯೆಗೀಡಾಯಿತು. ಇದರ ಬಗ್ಗೆ ಜನರಿಂದಲೂ ಟೀಕೆ ವ್ಯಕ್ತವಾಗುತ್ತಿದೆ. ಹಾಗಾಗಿ ಹೊಸ ವಿನ್ಯಾಸದಲ್ಲಿ, ಶಾಶ್ವತ ಪರಿಹಾರದ ಕಾಮಗಾರಿ ಹಮ್ಮಿಕೊಳ್ಳಲು ಉದ್ದೇಶಿಸಲಾಗಿದೆ’ ಎಂದರು.</p>.<p>***</p>.<p>ಸಮುದ್ರದಲ್ಲಿ ಈಜಲು ಹೋಗಿ ಹಲವು ಪ್ರವಾಸಿಗರು ಸಾವಿಗೀಡಾಗುತ್ತಿದ್ದಾರೆ. ಇದನ್ನು ತಡೆಯಲು ಜಿಲ್ಲಾಧಿಕಾರಿ ಜೊತೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು.<br /><em><strong>- ಕೋಟ ಶ್ರೀನಿವಾಸ ಪೂಜಾರಿ, ಜಿಲ್ಲಾ ಉಸ್ತುವಾರಿ ಸಚಿವ</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>