ಇಲಾಖೆಗಳ ಮಧ್ಯೆಸಮನ್ವಯ:ಮಳೆ, ಗಾಳಿಯಿಂದ ಮರಗಳು, ವಿದ್ಯುತ್ ಕಂಬಗಳು ಬಿದ್ದು ರಸ್ತೆ ಸಂಪರ್ಕಕ್ಕೆ ಅಡ್ಡಿಯಾಗುವಂತಹಸಂದರ್ಭಗಳಲ್ಲಿ ಸಂಬಂಧಪಟ್ಟ ಇಲಾಖೆಗಳು ತಕ್ಷಣ ಕಾರ್ಯ ಪ್ರವೃತ್ತರಾಗಬೇಕು. ಇಲಾಖೆಗಳ ನಡುವೆ ಸಮನ್ವಯವಿರಬೇಕು.ಕಳೆದ ಮಳೆಗಾಲ ಜಾನುವಾರನ್ನು ಬೇರೆ ಸ್ಥಳಗಳಿಗೆ ಸ್ಥಳಾಂತರಿಸಲಿಲ್ಲ, ಸೂಕ್ತ ಲಸಿಕೆ ನೀಡಿಲ್ಲ ಎಂಬ ದೂರುಗಳಿವೆ. ಇವು ಮರುಕಳಿಸದಂತೆ ಪಶು ಸಂಗೋಪನಾ ಇಲಾಖೆ ಗಮನ ಹರಿಸಬೇಕು ಎಂದರು.