<p><strong>ಶಿರಸಿ:</strong> ನಗರದ ಬಶೆಟ್ಟಿಕೆರೆಗೆ ಕಾಯಕಲ್ಪ ನೀಡಿ ಅದನ್ನು ಅಭಿವೃದ್ಧಿಪಡಿಸುವ ಕೆಲಸಕ್ಕೆ ಆದ್ಯತೆ ನೀಡಲಾಗುವುದು ಎಂದು ನಗರಸಭೆ ಅಧ್ಯಕ್ಷ ಗಣಪತಿ ನಾಯ್ಕ ಭರವಸೆ ನೀಡಿದರು.</p>.<p>ಅಧಿಕಾರಿಗಳು, ಜೀವಜಲ ಕಾರ್ಯಪಡೆ ಅಧ್ಯಕ್ಷ ಶ್ರೀನಿವಾಸ ಹೆಬ್ಬಾರ ಅವರ ಜತೆ ಸೋಮವಾರ ಕೆರೆಯ ಸ್ಥಿತಿಗತಿ ಪರಿಶೀಲಿಸಿದರು. ಬಳಿಕ ಮಾತನಾಡಿದ ಅವರು, ‘ಕಸ್ತೂರಬಾ ನಗರ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಿಗೆ ಈ ಕೆರೆ ಜಲಪಾತ್ರೆ ಎನಿಸಿದೆ. ಈಚಿನ ವರ್ಷದಲ್ಲಿ ಒತ್ತುವರಿ, ನಿರ್ವಹಣೆಯ ಕೊರತೆ ಕಾರಣಕ್ಕೆ ಕೆರೆ ಸೊರಗಿದೆ’ ಎಂದರು.</p>.<p>‘ಬಶೆಟ್ಟಿಕೆರೆ ಅಭಿವೃದ್ಧಿಪಡಿಸಲು ಜೀವಜಲ ಕಾರ್ಯಪಡೆ ಮುಂದೆ ಬಂದಿದೆ. ನಗರಸಭೆಯಿಂದಲೂ ಅಗತ್ಯ ಸಹಕಾರ ನೀಡಲಾಗುತ್ತದೆ. ಕೆರೆ ಹೂಳೆತ್ತಿಸುವ ಕೆಲಸ ಮಾಡಲಾಗುವುದು. ಬಳಿಕ ಅಲ್ಲಿ ಅಗತ್ಯ ಸೌಕರ್ಯಗಳನ್ನು ಒದಗಿಸುತ್ತೇವೆ’ ಎಂದರು.</p>.<p>ಉಪಾಧ್ಯಕ್ಷೆ ವೀಣಾ ಶೆಟ್ಟಿ, ಎಇಇ ಜಗದೀಶ, ಪರಿಸರ ಎಂಜಿನಿಯರ್ ನಾರಾಯಣ ನಾಯಕ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿರಸಿ:</strong> ನಗರದ ಬಶೆಟ್ಟಿಕೆರೆಗೆ ಕಾಯಕಲ್ಪ ನೀಡಿ ಅದನ್ನು ಅಭಿವೃದ್ಧಿಪಡಿಸುವ ಕೆಲಸಕ್ಕೆ ಆದ್ಯತೆ ನೀಡಲಾಗುವುದು ಎಂದು ನಗರಸಭೆ ಅಧ್ಯಕ್ಷ ಗಣಪತಿ ನಾಯ್ಕ ಭರವಸೆ ನೀಡಿದರು.</p>.<p>ಅಧಿಕಾರಿಗಳು, ಜೀವಜಲ ಕಾರ್ಯಪಡೆ ಅಧ್ಯಕ್ಷ ಶ್ರೀನಿವಾಸ ಹೆಬ್ಬಾರ ಅವರ ಜತೆ ಸೋಮವಾರ ಕೆರೆಯ ಸ್ಥಿತಿಗತಿ ಪರಿಶೀಲಿಸಿದರು. ಬಳಿಕ ಮಾತನಾಡಿದ ಅವರು, ‘ಕಸ್ತೂರಬಾ ನಗರ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಿಗೆ ಈ ಕೆರೆ ಜಲಪಾತ್ರೆ ಎನಿಸಿದೆ. ಈಚಿನ ವರ್ಷದಲ್ಲಿ ಒತ್ತುವರಿ, ನಿರ್ವಹಣೆಯ ಕೊರತೆ ಕಾರಣಕ್ಕೆ ಕೆರೆ ಸೊರಗಿದೆ’ ಎಂದರು.</p>.<p>‘ಬಶೆಟ್ಟಿಕೆರೆ ಅಭಿವೃದ್ಧಿಪಡಿಸಲು ಜೀವಜಲ ಕಾರ್ಯಪಡೆ ಮುಂದೆ ಬಂದಿದೆ. ನಗರಸಭೆಯಿಂದಲೂ ಅಗತ್ಯ ಸಹಕಾರ ನೀಡಲಾಗುತ್ತದೆ. ಕೆರೆ ಹೂಳೆತ್ತಿಸುವ ಕೆಲಸ ಮಾಡಲಾಗುವುದು. ಬಳಿಕ ಅಲ್ಲಿ ಅಗತ್ಯ ಸೌಕರ್ಯಗಳನ್ನು ಒದಗಿಸುತ್ತೇವೆ’ ಎಂದರು.</p>.<p>ಉಪಾಧ್ಯಕ್ಷೆ ವೀಣಾ ಶೆಟ್ಟಿ, ಎಇಇ ಜಗದೀಶ, ಪರಿಸರ ಎಂಜಿನಿಯರ್ ನಾರಾಯಣ ನಾಯಕ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>