<p><strong>ಶಿರಸಿ:</strong> ದ್ವೈವಾರ್ಷಿಕಕ್ಕೆ ಒಮ್ಮೆ ನಡೆಯುವ ಮಾರಿಕಾಂಬಾ ದೇವಿ ಜಾತ್ರೆಗೆ ಸಿದ್ಧತೆ ಆರಂಭಗೊಂಡಿದ್ದು ಬಿಡ್ಕಿಬೈಲಿನಲ್ಲಿ ದೇವಿಯ ಗದ್ದುಗೆ ಸುತ್ತ ಇರುವ ಅಂಗಡಿ ಮುಂಗಟ್ಟುಗಳನ್ನು ತೆರವುಗೊಳಿಸಲಾಗುತ್ತಿದೆ.</p>.<p>ಬಿಡ್ಕಿಬೈಲ್, ಕೋಣನ ಬಿಡ್ಕಿಯಲ್ಲಿರುವ ಸುಮಾರು 190 ಅಂಗಡಿಗಳನ್ನು ಜಾತ್ರೆ ಸಲುವಾಗಿ ತೆರವು ಮಾಡಲಾಗುತ್ತದೆ. ಶನಿವಾರದಿಂದಲೇ ಕೆಲವು ಅಂಗಡಿಗಳನ್ನು ತೆರವುಗೊಳಿಸುವ ಪ್ರಕ್ರಿಯೆಗೆ ಚಾಲನೆ ಸಿಕ್ಕಿತ್ತು. ಭಾನುವಾರ 50ಕ್ಕೂ ಹೆಚ್ಚು ಮಳಿಗೆಗಳನ್ನು ತೆರವು ಮಾಡಲಾಯಿತು.</p>.<p>ತರಕಾರಿ ಮಾರುಕಟ್ಟೆಯ ಮಳಿಗೆಗಳು, ಬಿಡ್ಕಿಬೈಲ್ ಒಳ ಆವರಣ ಮತ್ತು ಹೊರ ಆವರಣದಲ್ಲಿರುವ ಹೂವು, ಹಣ್ಣು, ದಿನಸಿ ಮಳಿಗೆಗಳು ತೆರವುಗೊಂಡಿವೆ. ಬಸ್ ನಿಲ್ದಾಣದ ಪಕ್ಕದಲ್ಲಿರುವ ಅಂಗಡಿಗಳನ್ನು ತೆರವುಗೊಳಿಸಲು ಆಯಾ ಅಂಗಡಿಕಾರರು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ.</p>.<p>ದೇವಿ ಪ್ರತಿಷ್ಠಾಪನೆಗೊಳ್ಳಲಿರುವ ಜಾತ್ರಾ ಗದ್ದುಗೆ ಸಿದ್ಧಪಡಿಸುವ ಕೆಲಸ ಭರದಿಂದ ಸಾಗಿದೆ. ಸಭಾ ಮಂಟಪ ನಿರ್ಮಾಣದ ಕೆಲಸಗಳನ್ನು ಕೈಗೆತ್ತಿಕೊಳ್ಳಲಾಗಿದೆ.</p>.<p>‘ಜಾತ್ರೆಗೆಹದಿನೈದು ದಿನ ಮಾತ್ರ ಬಾಕಿ ಇದ್ದು, ಅಗತ್ಯ ಸಿದ್ಧತೆಗಳನ್ನು ಮಾಡಬೇಕಿರುವುದರಿಂದ ಎರಡು ದಿನದೊಳಗೆ ಮಳಿಗೆ ತೆರವುಗೊಳಿಸಲು ಸೂಚನೆ ನೀಡಲಾಗಿದೆ’ ಎಂದು ಪೌರಾಯುಕ್ತ ಕೇಶವ ಚೌಗುಲೆ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿರಸಿ:</strong> ದ್ವೈವಾರ್ಷಿಕಕ್ಕೆ ಒಮ್ಮೆ ನಡೆಯುವ ಮಾರಿಕಾಂಬಾ ದೇವಿ ಜಾತ್ರೆಗೆ ಸಿದ್ಧತೆ ಆರಂಭಗೊಂಡಿದ್ದು ಬಿಡ್ಕಿಬೈಲಿನಲ್ಲಿ ದೇವಿಯ ಗದ್ದುಗೆ ಸುತ್ತ ಇರುವ ಅಂಗಡಿ ಮುಂಗಟ್ಟುಗಳನ್ನು ತೆರವುಗೊಳಿಸಲಾಗುತ್ತಿದೆ.</p>.<p>ಬಿಡ್ಕಿಬೈಲ್, ಕೋಣನ ಬಿಡ್ಕಿಯಲ್ಲಿರುವ ಸುಮಾರು 190 ಅಂಗಡಿಗಳನ್ನು ಜಾತ್ರೆ ಸಲುವಾಗಿ ತೆರವು ಮಾಡಲಾಗುತ್ತದೆ. ಶನಿವಾರದಿಂದಲೇ ಕೆಲವು ಅಂಗಡಿಗಳನ್ನು ತೆರವುಗೊಳಿಸುವ ಪ್ರಕ್ರಿಯೆಗೆ ಚಾಲನೆ ಸಿಕ್ಕಿತ್ತು. ಭಾನುವಾರ 50ಕ್ಕೂ ಹೆಚ್ಚು ಮಳಿಗೆಗಳನ್ನು ತೆರವು ಮಾಡಲಾಯಿತು.</p>.<p>ತರಕಾರಿ ಮಾರುಕಟ್ಟೆಯ ಮಳಿಗೆಗಳು, ಬಿಡ್ಕಿಬೈಲ್ ಒಳ ಆವರಣ ಮತ್ತು ಹೊರ ಆವರಣದಲ್ಲಿರುವ ಹೂವು, ಹಣ್ಣು, ದಿನಸಿ ಮಳಿಗೆಗಳು ತೆರವುಗೊಂಡಿವೆ. ಬಸ್ ನಿಲ್ದಾಣದ ಪಕ್ಕದಲ್ಲಿರುವ ಅಂಗಡಿಗಳನ್ನು ತೆರವುಗೊಳಿಸಲು ಆಯಾ ಅಂಗಡಿಕಾರರು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ.</p>.<p>ದೇವಿ ಪ್ರತಿಷ್ಠಾಪನೆಗೊಳ್ಳಲಿರುವ ಜಾತ್ರಾ ಗದ್ದುಗೆ ಸಿದ್ಧಪಡಿಸುವ ಕೆಲಸ ಭರದಿಂದ ಸಾಗಿದೆ. ಸಭಾ ಮಂಟಪ ನಿರ್ಮಾಣದ ಕೆಲಸಗಳನ್ನು ಕೈಗೆತ್ತಿಕೊಳ್ಳಲಾಗಿದೆ.</p>.<p>‘ಜಾತ್ರೆಗೆಹದಿನೈದು ದಿನ ಮಾತ್ರ ಬಾಕಿ ಇದ್ದು, ಅಗತ್ಯ ಸಿದ್ಧತೆಗಳನ್ನು ಮಾಡಬೇಕಿರುವುದರಿಂದ ಎರಡು ದಿನದೊಳಗೆ ಮಳಿಗೆ ತೆರವುಗೊಳಿಸಲು ಸೂಚನೆ ನೀಡಲಾಗಿದೆ’ ಎಂದು ಪೌರಾಯುಕ್ತ ಕೇಶವ ಚೌಗುಲೆ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>